AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ಸಂಬಂಧಪಟ್ಟಂತೆ ಮಹತ್ತರ ಬದಲಾವಣೆ: ಶಿವರಾಂ ಹೆಬ್ಬಾರ್

ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ: ಶಿವರಾಂ ಹೆಬ್ಬಾರ್

ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ಸಂಬಂಧಪಟ್ಟಂತೆ ಮಹತ್ತರ ಬದಲಾವಣೆ: ಶಿವರಾಂ ಹೆಬ್ಬಾರ್
ಶಿವರಾಂ ಹೆಬ್ಬಾರ್
TV9 Web
| Edited By: |

Updated on: Aug 13, 2021 | 12:34 PM

Share

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರಲು ನಿರ್ಧರಿಸಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಅತಿ ಶೀಘ್ರದಲ್ಲಿಯೇ ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಂಬಂಧಪಟ್ಟಂತೆ ಹೊಸ ಬಿಲ್ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ದೃಢ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ. ಅದು ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಹಾಯ ಆಗಲಿದ್ದು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂಪಾಯಿ ಪರಿಹಾರವೂ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ. ಮುಂದಿನ ಅಧಿವೇಶನದಲ್ಲಿ ಹೊಸ ಬಿಲ್ ಜಾರಿಗೊಳಿಸುತ್ತೇವೆ ಎಂದು ವಿಕಾಸಸೌಧದಲ್ಲಿ ಹೇಳಿಕೆ ನೀಡಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇದೊಂದು ಮಹತ್ತರ ಬದಲಾವಣೆ ಆಗಲಿದೆ ಎಂದು ಬಣ್ಣಿಸಿದ್ದಾರೆ. ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದು ಈಡೇರಲಿದೆ ಎಂದು ಭರವಸೆ ನೀಡಿದ್ದಾರೆ.

ಕಾರ್ಮಿಕ ಇಲಾಖೆ ಸಂಬಂಧಪಟ್ಟಂತೆ ವಿಜಲೆನ್ಸ್ ಸೆಲ್ ಮಾಡಲಾಗುತ್ತದೆ. ವಲಸೆ ಕಾರ್ಮಿಕರಿಗೆ ಪ್ರಮುಖ ಜಿಲ್ಲೆಯಲ್ಲಿ ವಸತಿ ಸಮುಚ್ಚಯ ಕಟ್ಟಲು ತಿರ್ಮಾನ ಮಾಡಲಾಗಿದೆ. ಅಸಂಘಟಿತ ವಲಯಕ್ಕೆ ಮಾಧ್ಯಮ ಸೇರಿದಂತೆ ಹಲವು ವರ್ಗಗಳನ್ನು ಸೇರಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು. ಹಲವು ವರ್ಗಗಳು ಅಸಂಘಟಿತ ವಲಯಕ್ಕೆ ಸೇರಬೇಕೆಂದು ಮನವಿ ಮೇರೆಗೆ ತಿರ್ಮಾನ ಮಾಡಲಾಗಿದೆ. ಒಟ್ಟಾರೆಯಾಗಿ ಕಾರ್ಮಿಕ ಇಲಾಖೆಯಲ್ಲಿ ಧೃಢ ಹೆಜ್ಜೆ ಇಡಬೇಕೆಂದು ನಿರ್ಧಾರ ಮಾಡಿದ್ದೇವೆ. ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಂಬಂಧಪಟ್ಟಂತೆ ಹೊಸ ಬಿಲ್ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಫಲಾನುಭವಿಗಳು ಮೃತರಾದರೆ 5 ಲಕ್ಷ ರೂಪಾಯಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳು ಹೊಸ ಬಿಲ್​ನಲ್ಲಿ ಇರಲಿದೆ. ಬರುವ ಅಧಿವೇಶನದಲ್ಲಿ ಹೊಸ ಬಿಲ್ ತರಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಶಾಸಕ ಸತೀಶ್​ ರೆಡ್ಡಿ ಮನೆಯಂಗಳ ಸ್ವಚ್ಛ ಮಾಡಲು 15ಕ್ಕೂ ಹೆಚ್ಚು ಪೌರಕಾರ್ಮಿಕರ ಬಳಕೆ 

ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕೇಂದ್ರ ಸರ್ಕಾರದ ಪೋರ್ಟಲ್ ಈ ವಾರ ಆರಂಭ ಸಾಧ್ಯತೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?