AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ!

Car Price Hike: ಕಚ್ಚಾ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಆಗಸ್ಟ್‌ನಿಂದ ಹೊಸ ಕಾರುಗಳ ಬೆಲೆ 50-60 ಸಾವಿರ ರೂ. ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿಂದೆ ಜಿಎಸ್‌ಟಿ 2.0 ಜಾರಿಯಾದಾಗ ಕಡಿಮೆಯಾಗಿದ್ದ ಕಾರು ಬೆಲೆ, ಈಗ ಮತ್ತೆ ಏರಿಕೆಯಾಗುತ್ತಿರುವುದು ಗ್ರಾಹಕರಿಗೆ ಹೊರೆ ಆಗಲಿದೆ. ಹೀಗಾಗಿ ಗ್ರಾಹಕರು ಈಗಲೇ ಕಾರು ಬುಕ್​ ಮಾಡುತ್ತಿದ್ದಾರೆ.

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ!
ಕಾರು Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on: Jul 24, 2026 | 8:58 PM

Share

ಬೆಂಗಳೂರು, ಜುಲೈ 24: ಜಿಎಸ್ಟಿ- 2.0 ಜಾರಿಯಾದ ಮೇಲೆ ಹೊಸ ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಇದೀಗ ಯುದ್ದದ ಎಫೆಕ್ಟ್​ನಿಂದ ಕಚ್ಚಾವಸ್ತುಗಳ ಬೆಲೆ ಏರಿಕೆ (Car Price Hike) ಆಗಿದ್ದು, ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಮೇಲೆ 50 ರಿಂದ 60 ಸಾವಿರ ರೂ.ಯಷ್ಟು ಹೆಚ್ಚಳವಾಗಲಿದ್ದು, ಹೀಗಾಗಿ ಜನರು ಈ ತಿಂಗಳೇ ಕಾರು ಬುಕ್ಕಿಂಗ್ ಮಾಡಲು ಮುಂದಾಗಿದ್ದಾರೆ.

ಯುದ್ಧದ ಎಫೆಕ್ಟ್​: ಕಾರುಗಳ ಬೆಲೆ ಏರಿಕೆ

ಜಿಎಸ್ಟಿ 2-0 ಜಾರಿಯಾದ ಮೇಲೆ ಕಾರುಗಳ ಮೇಲೆ 50 ರಿಂದ 1 ಲಕ್ಷ ರೂ.ವರೆಗೆ, ದ್ವಿಚಕ್ರ ವಾಹನಗಳ ಮೇಲೆ 10 ರಿಂದ 20 ಸಾವಿರ ರೂ.ವರೆಗೆ ಬೆಲೆ ಕಡಿಮೆ ಆಗಿತ್ತು. ಈ ಹಿನ್ನೆಲೆ ಹೊಸ ವಾಹನ ಖರೀದಿ ಮಾಡುವವರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗಿತ್ತು. ಇದೀಗ ಯುದ್ಧದ ಎಫೆಕ್ಟ್​ನಿಂದ ಕಚ್ಚಾ ವಸ್ತುಗಳ ಬೆಲೆ ಏರಿಕೆ ಆಗಿರುವ ಹಿನ್ನೆಲೆ, ಹೊಸ ಕಾರುಗಳ ಮೇಲೆ ಎಕ್ಸ್ ಶೋ ರೂಂ ಬೆಲೆ ಮೇಲೆ 45 ರಿಂದ 50 ಸಾವಿರ ರೂ.ವರೆಗೆ ಏರಿಕೆ ಆದರೆ, ಆನ್-ರೋಡ್ ಬೆಲೆ ಮೇಲೆ 15 ರಿಂದ 20 ರೂ.ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ. ಅಂದರೆ ಹೊಸ ಕಾರು ಕೊಳ್ಳುವವರಿಗೆ 60 ರಿಂದ 70 ಸಾವಿರ ರೂ. ಹೆಚ್ಚಾಗಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿವೆ ಬರೋಬ್ಬರಿ 25 ಲಕ್ಷ ಪ್ರೈವೆಟ್ ಕಾರುಗಳು! ದೆಹಲಿ, ಮುಂಬೈಗೇ ಸೆಡ್ಡು ಹೊಡೆದ ಸಿಲಿಕಾನ್ ಸಿಟಿ

ಇನ್ನು ಕಳೆದ ಕೆಲ ತಿಂಗಳಿನಿಂದ ಕಾರುಗಳ ಬೆಲೆ ನಿರಂತರವಾಗಿ ಏರಿಕೆ ಆಗುತ್ತಲೇ ಇದೆ. ಆಗಸ್ಟ್​ ತಿಂಗಳಿನಿಂದ ಹೊಸ ದರ ಜಾರಿ ಆಗಲಿದೆ. ವಾಹನ ತಯಾರಿಕಾ ಸಂಸ್ಥೆಗಳು ತಮ್ಮ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಕೆಯ ಹಾದಿ ಹಿಡಿದಿವೆ. ಪ್ರತಿ ಮಾಡೆಲ್​ಗಳ ಮೇಲೆ 20 ರಿಂದ 50 ಸಾವಿರ ರೂ. ದರ ಏರಿಕೆ ಆಗುವ ಸಾಧ್ಯತೆ ಇದೆ.

ಐಷಾರಾಮಿ ಕಾರುಗಳ ಬೆಲೆ ಏರಿಕೆ ಇಲ್ಲ

ಐಷಾರಾಮಿ ಕಾರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎನ್ನಲಾಗುತ್ತಿದೆ. ಸಾಮಾನ್ಯ ಜನರು ಖರೀದಿ ಮಾಡುವ ಕಾರುಗಳ ಮೇಲೆ ಮಾತ್ರ ಬೆಲೆ ಏರಿಕೆ ಆಗಲಿದೆ. ಅಂದರೆ 10ರಿಂದ 15 ಲಕ್ಷದೊಳಗಿನ ಕಾರುಗಳ ಬೆಲೆ ಹೆಚ್ಚಳವಾಗಲಿದೆ.

ಗ್ರಾಹಕರು ಹೇಳಿದ್ದಿಷ್ಟು 

ಈ ಬಗ್ಗೆ ಗ್ರಾಹಕರಾದ ವೆಂಕಟ್ ಅವರು ಮಾತನಾಡಿದ್ದು, ‘ಮುಂದಿನ ತಿಂಗಳಿನಿಂದ ಕಾರಿನ ಬೆಲೆ ಏರಿಕೆ ಆಗಲಿರುವ ಹಿನ್ನೆಲೆ, ನಾವು ಈ ತಿಂಗಳೇ ಕಾರು ಬುಕ್ ಮಾಡಿದ್ದೇವೆ. ಇದರಿಂದ ನಮಗೆ ತುಂಬಾ ಹಣ ಉಳಿತಾಯವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಒಂದೇ ವರ್ಷದಲ್ಲಿ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ

ಒಟ್ಟಿನಲ್ಲಿ ಜಿಎಸ್​​ಟಿ ಕಡಿಮೆ ಆದ ಮೇಲೆ ಕಾರುಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು, ಆದರೆ ಮುಂದಿನ ತಿಂಗಳಿನಿಂದ ಕಾರುಗಳ ಮೇಲೆ ಬೆಲೆ ಏರಿಕೆ ಆಗ್ತಿರೋದ್ರಿಂದ ಒಂದಷ್ಟು ಗ್ರಾಹಕರಿಗೆ ಹೊರೆ ಆಗುವುದಂತು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ