AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ

ಬೆಂಗಳೂರು ನಗರದ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ತಂತ್ರವನ್ನು ಅಳವಡಿಸಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪೊಲೀಸರು ನಮ್ಮ ಜೊತೆ ಯಾವ ರೀತಿಯಾಗಿ ಪ್ರತಿಕ್ರಿಯಿಸಿದರು ಎನ್ನುವುದರ ಮಾಹಿತಿ ಸಂಗ್ರಹ ಮಾಡುತ್ತದೆ.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ
ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ
TV9 Web
| Edited By: |

Updated on:Nov 29, 2022 | 11:38 AM

Share

ಬೆಂಗಳೂರು: ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ(DCP c.k Baba) ಅವರು ವಿಭಿನ್ನ ಪ್ರಯತ್ನವನ್ನು ಮಾಡಿದ್ದಾರೆ. ಆಗ್ನೇಯ ವಿಭಾಗದ ಪ್ರತಿ ಪೊಲೀಸ್ ಠಾಣೆಯಲ್ಲಿ ಕ್ಯೂ ಆರ್ ಕೋಡ್ ಬ್ಯಾನರ್ ಅಳವಡಿಕೆ ಮಾಡಿ ಠಾಣೆಗೆ ಬರುವ ದೂರುದಾರರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಪೊಲೀಸ್​ ಠಾಣೆಗೆ ಹೋದಾಗ ಸಮಸ್ಯೆ ಪರಿಹಾರ ಆಯಿತಾ, ಪೊಲೀಸರು ದೂರು ದಾಖಲು ಮಾಡಿಕೊಂಡರಾ ಅಥವಾ ದೂರು ದಾಖಲಿಸುವುದಕ್ಕೆ ಲಂಚ ಕೇಳಿದ್ದಾರಾ, ಒಂದು ವೇಳೆ ಲಂಚ ಕೇಳಿದರೆ ಆ ಅಧಿಕಾರಿ ಯಾರು ಹೀಗೆ ಹಲವು ಪ್ರಶ್ನೆಗಳ ಒಳಗೊಂಡಂತ ಕ್ಯೂ ಆರ್ ಕೋಡ್ ಆಧಾರಿತ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದ್ದು, ಈ ಅಪ್ಲಿಕೇಷನ್ ಮುಖಾಂತರ ನೀವು ನೇರವಾಗಿ ಡಿಸಿಪಿ ಸಿಕೆ ಬಾಬ ಅವರಿಗೆ ದೂರು ನೀಡಬಹುದು.

ಇನ್ನು ಇಂತಹ ನೂತನ ಪ್ರಯೋಗಕ್ಕೆ ಮುಂದಾಗಿರುವ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಖುದ್ದಾಗಿ ತಾವೇ ಇದನ್ನು ಪ್ರತಿನಿತ್ಯ ಮಾನಿಟರ್ ಸಹ ಮಾಡುತ್ತಾರೆ. ಯಾವುದೇ ಸಮಸ್ಯೆಗಳು ಇದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಸೂಚನೆ ನೀಡುತ್ತಾರೆ. ಪೊಲೀಸರ ಕರ್ತವ್ಯ ಲೋಪ ಮಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಿರುವ ಡಿಸಿಪಿ. ಕೇವಲ ಪೊಲೀಸರ ಕೆಟ್ಟತನ ಅಷ್ಟೇ ಅಲ್ಲ ಒಳ್ಳೆತನದ ಬಗ್ಗೆಯೂ ನೀವು ಮಾಹಿತಿ ಹಂಚಿಕೊಳ್ಳಬಹುದು. ಈ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಮುಂದಾದ ಡಿಸಿಪಿ ಸಿಕೆ ಬಾಬ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Tue, 29 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ