AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ

ಬೆಂಗಳೂರು ನಗರದ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ತಂತ್ರವನ್ನು ಅಳವಡಿಸಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪೊಲೀಸರು ನಮ್ಮ ಜೊತೆ ಯಾವ ರೀತಿಯಾಗಿ ಪ್ರತಿಕ್ರಿಯಿಸಿದರು ಎನ್ನುವುದರ ಮಾಹಿತಿ ಸಂಗ್ರಹ ಮಾಡುತ್ತದೆ.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ
ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ
TV9 Web
| Edited By: |

Updated on:Nov 29, 2022 | 11:38 AM

Share

ಬೆಂಗಳೂರು: ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ(DCP c.k Baba) ಅವರು ವಿಭಿನ್ನ ಪ್ರಯತ್ನವನ್ನು ಮಾಡಿದ್ದಾರೆ. ಆಗ್ನೇಯ ವಿಭಾಗದ ಪ್ರತಿ ಪೊಲೀಸ್ ಠಾಣೆಯಲ್ಲಿ ಕ್ಯೂ ಆರ್ ಕೋಡ್ ಬ್ಯಾನರ್ ಅಳವಡಿಕೆ ಮಾಡಿ ಠಾಣೆಗೆ ಬರುವ ದೂರುದಾರರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಪೊಲೀಸ್​ ಠಾಣೆಗೆ ಹೋದಾಗ ಸಮಸ್ಯೆ ಪರಿಹಾರ ಆಯಿತಾ, ಪೊಲೀಸರು ದೂರು ದಾಖಲು ಮಾಡಿಕೊಂಡರಾ ಅಥವಾ ದೂರು ದಾಖಲಿಸುವುದಕ್ಕೆ ಲಂಚ ಕೇಳಿದ್ದಾರಾ, ಒಂದು ವೇಳೆ ಲಂಚ ಕೇಳಿದರೆ ಆ ಅಧಿಕಾರಿ ಯಾರು ಹೀಗೆ ಹಲವು ಪ್ರಶ್ನೆಗಳ ಒಳಗೊಂಡಂತ ಕ್ಯೂ ಆರ್ ಕೋಡ್ ಆಧಾರಿತ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದ್ದು, ಈ ಅಪ್ಲಿಕೇಷನ್ ಮುಖಾಂತರ ನೀವು ನೇರವಾಗಿ ಡಿಸಿಪಿ ಸಿಕೆ ಬಾಬ ಅವರಿಗೆ ದೂರು ನೀಡಬಹುದು.

ಇನ್ನು ಇಂತಹ ನೂತನ ಪ್ರಯೋಗಕ್ಕೆ ಮುಂದಾಗಿರುವ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಖುದ್ದಾಗಿ ತಾವೇ ಇದನ್ನು ಪ್ರತಿನಿತ್ಯ ಮಾನಿಟರ್ ಸಹ ಮಾಡುತ್ತಾರೆ. ಯಾವುದೇ ಸಮಸ್ಯೆಗಳು ಇದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಸೂಚನೆ ನೀಡುತ್ತಾರೆ. ಪೊಲೀಸರ ಕರ್ತವ್ಯ ಲೋಪ ಮಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಿರುವ ಡಿಸಿಪಿ. ಕೇವಲ ಪೊಲೀಸರ ಕೆಟ್ಟತನ ಅಷ್ಟೇ ಅಲ್ಲ ಒಳ್ಳೆತನದ ಬಗ್ಗೆಯೂ ನೀವು ಮಾಹಿತಿ ಹಂಚಿಕೊಳ್ಳಬಹುದು. ಈ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಮುಂದಾದ ಡಿಸಿಪಿ ಸಿಕೆ ಬಾಬ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Tue, 29 November 22

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು