AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ

ಬೆಂಗಳೂರು ನಗರದ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ತಂತ್ರವನ್ನು ಅಳವಡಿಸಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಪೊಲೀಸರು ನಮ್ಮ ಜೊತೆ ಯಾವ ರೀತಿಯಾಗಿ ಪ್ರತಿಕ್ರಿಯಿಸಿದರು ಎನ್ನುವುದರ ಮಾಹಿತಿ ಸಂಗ್ರಹ ಮಾಡುತ್ತದೆ.

ಸಿಬ್ಬಂದಿ ಕೆಲಸದ ಮೇಲೆ ನಿಗಾ ಇಡಲು ಆಗ್ನೇಯ ವಿಭಾಗದ ಡಿಸಿಪಿಯಿಂದ ಹೊಸ ಪ್ರಯತ್ನ
ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Nov 29, 2022 | 11:38 AM

Share

ಬೆಂಗಳೂರು: ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ(DCP c.k Baba) ಅವರು ವಿಭಿನ್ನ ಪ್ರಯತ್ನವನ್ನು ಮಾಡಿದ್ದಾರೆ. ಆಗ್ನೇಯ ವಿಭಾಗದ ಪ್ರತಿ ಪೊಲೀಸ್ ಠಾಣೆಯಲ್ಲಿ ಕ್ಯೂ ಆರ್ ಕೋಡ್ ಬ್ಯಾನರ್ ಅಳವಡಿಕೆ ಮಾಡಿ ಠಾಣೆಗೆ ಬರುವ ದೂರುದಾರರು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಮಾಹಿತಿ ಹಂಚಿಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಪೊಲೀಸ್​ ಠಾಣೆಗೆ ಹೋದಾಗ ಸಮಸ್ಯೆ ಪರಿಹಾರ ಆಯಿತಾ, ಪೊಲೀಸರು ದೂರು ದಾಖಲು ಮಾಡಿಕೊಂಡರಾ ಅಥವಾ ದೂರು ದಾಖಲಿಸುವುದಕ್ಕೆ ಲಂಚ ಕೇಳಿದ್ದಾರಾ, ಒಂದು ವೇಳೆ ಲಂಚ ಕೇಳಿದರೆ ಆ ಅಧಿಕಾರಿ ಯಾರು ಹೀಗೆ ಹಲವು ಪ್ರಶ್ನೆಗಳ ಒಳಗೊಂಡಂತ ಕ್ಯೂ ಆರ್ ಕೋಡ್ ಆಧಾರಿತ ಸ್ಕ್ಯಾನರ್ ಅಳವಡಿಕೆ ಮಾಡಲಾಗಿದ್ದು, ಈ ಅಪ್ಲಿಕೇಷನ್ ಮುಖಾಂತರ ನೀವು ನೇರವಾಗಿ ಡಿಸಿಪಿ ಸಿಕೆ ಬಾಬ ಅವರಿಗೆ ದೂರು ನೀಡಬಹುದು.

ಇನ್ನು ಇಂತಹ ನೂತನ ಪ್ರಯೋಗಕ್ಕೆ ಮುಂದಾಗಿರುವ ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು ಖುದ್ದಾಗಿ ತಾವೇ ಇದನ್ನು ಪ್ರತಿನಿತ್ಯ ಮಾನಿಟರ್ ಸಹ ಮಾಡುತ್ತಾರೆ. ಯಾವುದೇ ಸಮಸ್ಯೆಗಳು ಇದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆದು ಸೂಚನೆ ನೀಡುತ್ತಾರೆ. ಪೊಲೀಸರ ಕರ್ತವ್ಯ ಲೋಪ ಮಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಿರುವ ಡಿಸಿಪಿ. ಕೇವಲ ಪೊಲೀಸರ ಕೆಟ್ಟತನ ಅಷ್ಟೇ ಅಲ್ಲ ಒಳ್ಳೆತನದ ಬಗ್ಗೆಯೂ ನೀವು ಮಾಹಿತಿ ಹಂಚಿಕೊಳ್ಳಬಹುದು. ಈ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಮುಂದಾದ ಡಿಸಿಪಿ ಸಿಕೆ ಬಾಬ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:35 am, Tue, 29 November 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್