AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್​ಗೆ ಹೊಸ ಸಹಾಯವಾಣಿ; ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿಯಿಂದ ಅಧಿಕಾರಿ ನೇಮಕ

ಪ್ರತಿ ಇಂದಿರಾ ಕ್ಯಾಂಟೀನ್​ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇಂದಿರಾ ಕ್ಯಾಂಟೀನ್​ಗೆ ಹೊಸ ಸಹಾಯವಾಣಿ; ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿಯಿಂದ ಅಧಿಕಾರಿ ನೇಮಕ
ಇಂದಿರಾ ಕ್ಯಾಂಟೀನ್
Shivaraj
| Edited By: |

Updated on: Jul 11, 2023 | 9:17 AM

Share

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್(Indira Canteen)​ ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುತ್ತಿದೆ. ಇಂದಿರಾ ಕ್ಯಾಂಟಿನ್​ನ ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಬಜೆಟ್‌ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ. ಆದ್ರೆ ಇಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ(BBMP) ಮುಂದಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಅವರ ಭೇಟಿ ವೇಳೆ ಇಂದಿರಾ ಕ್ಯಾಂಟೀನ್​ನಲ್ಲಿ ಹಚ್ಚಿನ ಹಣ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಈಗ ಪ್ರತಿ ಇಂದಿರಾ ಕ್ಯಾಂಟೀನ್​ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ, ಕ್ಯಾಂಟೀನ್ ಸ್ವಚ್ಚತೆ ಬಗ್ಗೆ ನಿಗಾ ಇಡಲು ತಮ್ಮದೇ ಅಧಿಕಾರಿ ನೇಮಿಸಲು ಬಿಬಿಎಂಪಿ ಪಾಲಿಕೆ ಮುಂದಾಗಿದೆ. ಇದರ ಜೊತೆಗೆ ಹೊಸ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಇಂದಿರಾ ಕ್ಯಾಂಟೀನ್​ಗೆ ಸಹಾಯವಾಣಿ

1533 ಸಹಾಯವಾಣಿ ಮೂಲಕ ಜನರಿಗೆ ಸೇವೆ ನೀಡಲು ಹೊಸ ಸಹಾಯವಾಣಿ ರೂಪಿಸಲಾಗಿದ್ದು ಎಲ್ಲಾ ಇಂದಿರಾ ಕ್ಯಾಂಟೀನ್​ಗೂ ಸಹಾಯವಾಣಿ ಅಳವಡಿಕೆಗೆ ತೀರ್ಮಾನಿಸಲಾಗಿದೆ. ಇದರ ಜೊತೆಗೆ ರಸ್ತೆ ಬದಿ ಕಸ ಸುರಿಯುವುದನ್ನ ತಡೆಯಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ. ಕಸ ಸುರಿಯುವವರ ಮೇಲೆ ನಿಗಾ ವಹಿಸಲು ಪಾಲಿಕೆ ಮಾರ್ಷಲ್ಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ತಂಡ ರಚನೆ ಮಾಡಿದೆ. ರಸ್ತೆ ಬದಿ ಕಸ ಹಾಕುವವರ ಮೇಲೆ ನಿಗಾ, ಬ್ಲಾಕ್ ಸ್ಪಾಟ್, ರಸ್ತೆ ಗುಂಡಿ ಮೇಲೂ ಈ ತಂಡ ನಿಗಾ ವಹಿಸಲಿದೆ. ತ್ಯಾಜ್ಯ ವಿಲೇವಾರಿ ಮಾಡೋ ಬಿಬಿಎಂಪಿ ಕಾಂಪ್ಯಾಕ್ಟರ್​ಗಳ ಮೇಲೂ ನಿಗಾ ಇಡಲಾಗುತ್ತೆ. ಪ್ರಾಯೋಗಿಕವಾಗಿ ಒಂದು ವಲಯದಲ್ಲಿ ಯೋಜನೆ ಆರಂಭ ಮಾಡಲು ಪಾಲಿಕೆ ಮುಂದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ