AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​

ಸಿಸಿ, ಓಸಿ ಪಡೆಯದೇ ಕಟ್ಟಿರುವ ಮನೆಗಳ ಮಾಲಕರ ಸಮಸ್ಯೆ ಆಲಿಸಿ ಅವುಗಳಿಗೆ ಮುಕ್ತಿ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಬಗ್ಗೆ ಮಹತ್ವದ ಸಭೆ ನಡೆದಿದ್ದು, ಹಲವು ನಿರ್ಣಯಗಳನ್ನ ಈ ವೇಳೆ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಇವುಗಳಿಗೆ ಅಂತಿಮ ಮುದ್ರೆ ಬೀಳಬೇಕಿದೆ.

ಸಿಎಂ ಸಭೆಯಲ್ಲಿ ಮಹತ್ವದ ನಿರ್ಣಯ: ಮಾನದಂಡ ಪಾಲಿಸದೆ ಮನೆ ಕಟ್ಟಿದವರಿಗೆ ಗುಡ್​ ನ್ಯೂಸ್​
ಮಹತ್ವದ ಸಭೆಯಲ್ಲಿ ಸಿಎಂ, ಡಿಸಿಎಂ ಭಾಗಿ
ಹರೀಶ್ ಜಿ.ಆರ್​.
| Edited By: |

Updated on: Oct 08, 2025 | 7:37 PM

Share

ಬೆಂಗಳೂರು, ಅಕ್ಟೋಬರ್​ 08: ಸಿಸಿ, ಓಸಿ ಪಡೆಯದೇ ಮನೆಗಳ ಕಟ್ಟಿರುವ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಗುಡ್​ ನ್ಯೂಸ್ ಸಿಕ್ಕಿದೆ. ನೂತನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ಸರಬರಾಜು ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ವಿದ್ಯುತ್ ಸಂಪರ್ಕ ಸಿಗದೆ ತೊಂದರೆ ಅನುಭವಿಸುತ್ತಿರುವ ಕಟ್ಟಡದ ಮಾಲೀಕರ ಅಳಲು ಆಲಿಸಿ, ಅವರ ಸಮಸ್ಯೆಗಳ ಬಗ್ಗೆ ಸಂಕ್ಷಿಪ್ತವಾಗಿ ಚರ್ಚಿಸಿ ಬಗೆಹರಿಸಲು ಸಿಎಂ ಮುಂದಾಗಿದ್ದಾರೆ. ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

1200 ಅಡಿಯಲ್ಲಿ ಕಟ್ಟಿರುವ ಮನೆಗೆ ಮಾತ್ರ ವಿದ್ಯುತ್, ನೀರು ಸರಬರಾಜಿಗೆ ನಿರ್ಧರಿಸಲಾಗಿದ್ದು, 30X40 ಸೈಟ್​​ನಲ್ಲಿ ಕಟ್ಟಿರುವ ಮನೆಗಳಿಗೆ ಅನುಮತಿ ನೀಡುವ ಬಗ್ಗೆ ಸರ್ಕಾರ ಚಿಂತಿಸಿದೆ. 1200 ಅಡಿಗಿಂತ ಮೇಲ್ಪಟ್ಟ ಕಟ್ಟಡಗಳಿಗೆ ಸುಗ್ರೀವಾಜ್ಞೆ ಮೂಲಕ ಅನುಮತಿ ನೀಡುವ ಬಗ್ಗೆಯೂ ತೀರ್ಮಾನಿಸೋದಾಗಿ ಸಭೆಯಲ್ಲಿ ತಿಳಿಸಲಾಗಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಸಚಿವ ಸಂಪುಟ ಸಭೆಯಲ್ಲಿ ಆಗಬೇಕಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಜಿಬಿಎ ಅಧಿಕಾರಿಗಳು, ಇಂಧನ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು, ಕಾನೂನು‌ ಅಡೆತಡೆಗಳ ಬಗ್ಗೆಯೂ ಈ ವೇಳೆ ಸಮಾಲೋಚನೆ ನಡೆಸಲಾಗಿದೆ.

ಮಹತ್ವದ ಸಭೆಯಲ್ಲಿ ಸಿಎಂ, ಡಿಸಿಎಂ ಭಾಗಿ

ಡಿಸಿಎಂ ಡಿಕೆಶಿ ಹೇಳಿದ್ದೇನು?

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​, 30X40ವರೆಗೆ ಅನುಮತಿ ಕೊಡಲು ತೀರ್ಮಾನ ಮಾಡಿದ್ದೇವೆ. 30X40 ಅಂದರೆ 1200 ಚ.ಮೀ.ಗೆ ಅನುಮತಿ ನೀಡಲಾಗುವುದು. ಇಂಧನ ಇಲಾಖೆಗೆ ಅನುಷ್ಠಾನಗೊಳಿಸಲು ಅಡೆತಡೆಗಳು ಇದ್ದು, ಅದನ್ನು ನಿವಾರಿಸಿ ಅನುಮತಿಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!