AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ LPG ಸಂಪರ್ಕ ಸ್ಥಗಿತ: 6 ತಿಂಗಳಿಂದ ಸಿಗದ ಸಿಲಿಂಡರ್; ಗ್ರಾಹಕರು ಪರದಾಟ

ಕಳೆದ ಆರು ತಿಂಗಳಿಂದ ಹೊಸ ಎಲ್‌ಪಿಜಿ ಸಂಪರ್ಕಗಳು ಸ್ಥಗಿತಗೊಂಡಿದ್ದು, ಗ್ರಾಹಕರು ತೀವ್ರ ಪರದಾಟ ನಡೆಸಿದ್ದಾರೆ. ಹೊಸ ಸಿಲಿಂಡರ್‌ಗೆ ಭಾರೀ ಬೇಡಿಕೆಯಿದ್ದರೂ, ಕೇಂದ್ರ ಸರ್ಕಾರದಿಂದ ಇನ್ನೂ ಅನುಮೋದನೆ ದೊರೆತಿಲ್ಲ. ಮಾರ್ಚ್‌ನಿಂದ ಸ್ಥಗಿತಗೊಂಡಿರುವ ಪ್ರಕ್ರಿಯೆ ಪುನರಾರಂಭಗೊಳ್ಳದಿರುವುದರಿಂದ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದು, ಜನರಿಗೆ ತೀವ್ರ ಅನಾನುಕೂಲವಾಗಿದೆ.

ಹೊಸ LPG ಸಂಪರ್ಕ ಸ್ಥಗಿತ: 6 ತಿಂಗಳಿಂದ ಸಿಗದ ಸಿಲಿಂಡರ್; ಗ್ರಾಹಕರು ಪರದಾಟ
ಗ್ಯಾಸ್​ ಸಿಲಿಂಡರ್​Image Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Aug 28, 2026 | 9:52 PM

Share

ಬೆಂಗಳೂರು, ಆಗಸ್ಟ್​​ 28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಪರಿಣಾಮ ದೇಶದಲ್ಲಿ ಎದುರಾಗಿದ್ದ ಎಲ್‌ಪಿಜಿ ಗ್ಯಾಸ್ (LPG cylinder) ಅಭಾವ ಸಾರ್ವಜನಿಕರನ್ನು ಇನ್ನಿಲ್ಲದಂತೆ ಕಾಡಿತ್ತು. ಸದ್ಯ ಹಳೆಯ ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ಕೊಂಚ ನಿರಾಳತೆ ತಂದಿದ್ದರೂ, ಹೊಸದಾಗಿ ಗೃಹಬಳಕೆಯ ಎಲ್‌ಪಿಜಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಗ್ರಾಹಕರ ಪಾಡು ಮಾತ್ರ ಹೇಳತೀರದಾಗಿದೆ. ಕಳೆದ ಆರು ತಿಂಗಳಿಂದ ಹೊಸ ಸಂಪರ್ಕಗಳ ಹಂಚಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ದಿನಬಳಕೆಯ ಅತ್ಯಗತ್ಯ ವಸ್ತುವಿಗಾಗಿ ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವ ದುಸ್ಥಿತಿ ನಿರ್ಮಾಣವಾಗಿದೆ.

ಹೊಸ ಎಲ್‌ಪಿಜಿ ಸಂಪರ್ಕ ಸಿಗದೆ ಜನರು ಪರದಾಟ

ಹಲವು ತಿಂಗಳ ಹಿಂದೆ ರಾಜ್ಯದಲ್ಲಿ ಎದುರಾಗಿದ್ದ ಎಲ್​​ಪಿಜಿ ಗ್ಯಾಸ್ ಅಭಾವದಿಂದ ನರಳಾಡದ ಜನರಿಲ್ಲ. ಕೊನೆಗೂ ಹೇಗೋ ನಿಧಾನಗತಿಯಲ್ಲಿ ಬೇಡಿಕೆಗೆ ತಕ್ಕಂತೆ ಎಲ್​​​ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಆದರೆ ಮತ್ತೊಂದೆಡೆ ಹೊಸ ಗೃಹ ಬಳಕೆ ಎಲ್​​ಪಿಜಿ ಸಿಲಿಂಡರ್​ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರು ಕಳೆದ 6 ತಿಂಗಳಿಂದ ತೀವ್ರ ನಿರಾಶೆಯಿಂದಲೇ ಕಾಲ ದೂಡುತ್ತಿದ್ದಾರೆ.

ಕೇಂದ್ರದ ಅನುಮೋದನೆಗೆ ಬ್ರೇಕ್: ರಾಶಿ ಬಿದ್ದ ಅರ್ಜಿಗಳು

ಹೊಸ ಗೃಹಬಳಕೆಯ ಸಿಲಿಂಡರ್‌ಗಳಿಗೆ ದಿನೇ ದಿನೆ ಬೇಡಿಕೆ ಹೆಚ್ಚುತ್ತಿದ್ದರೂ, ಕೇಂದ್ರ ಸರ್ಕಾರದಿಂದ ಹೊಸ ಸಂಪರ್ಕಗಳ ಹಂಚಿಕೆಗೆ ಅಗತ್ಯ ಅನುಮೋದನೆ ದೊರೆತಿಲ್ಲ. ಕಳೆದ ಮಾರ್ಚ್ ತಿಂಗಳಿಂದ ಸ್ಥಗಿತಗೊಂಡಿರುವ ಅನುಮೋದನೆ ಪ್ರಕ್ರಿಯೆ ಈವರೆಗೂ ಪುನರಾರಂಭವಾಗಿಲ್ಲ.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಹೊಸ ರೂಲ್ಸ್‌: ಗ್ರಾಹಕರು ಮಾಡಬೇಕಾಗಿದ್ದಿಷ್ಟೇ!

ಇದರ ಪರಿಣಾಮವಾಗಿ ನಗರದ ಬಹುತೇಕ ಪ್ರತಿ ಗ್ಯಾಸ್ ಏಜೆನ್ಸಿಗಳಲ್ಲಿ 200ರಿಂದ 300ಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗದೆ ಧೂಳು ಹಿಡಿಯುತ್ತಿವೆ. ನಿತ್ಯ ಗ್ಯಾಸ್ ಏಜೆನ್ಸಿಗಳಿಗೆ ಜನರು ಎಡತಾಕುತ್ತಿದ್ದಾರೆ.

ಹೊಸದಾಗಿ ಮದುವೆಯಾದ ಕುಟುಂಬಗಳ ಪರದಾಟ

ಕಳೆದ ಆರು ತಿಂಗಳ ಅವಧಿಯಲ್ಲಿ ಮದುವೆಯಾಗಿ ಪ್ರತ್ಯೇಕ ಮನೆ ಮಾಡಿಕೊಂಡವರು ಹಾಗೂ ಉದ್ಯೋಗ ಅರಸಿ ನಗರಕ್ಕೆ ಬಂದು ಹೊಸ ಸಂಸಾರ ಹೂಡಿದ ಕುಟುಂಬಗಳು ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಂಪರ್ಕವಿಲ್ಲದೆ ಅಡುಗೆ ಮಾಡಲು ಹೆಣಗಾಡುತ್ತಿರುವ ಗ್ರಾಹಕರು ದಿಕ್ಕು ತೋಚದಂತಾಗಿದ್ದಾರೆ. ಸಂಕಷ್ಟದಲ್ಲಿರುವ ಈ ಕುಟುಂಬಗಳ ಪರಿಸ್ಥಿತಿಯನ್ನು ಅರಿತು, ಕೇಂದ್ರ ಸರ್ಕಾರವು ಕೂಡಲೇ ಈ ನಿಲುವನ್ನು ಸಡಿಲಿಸಿ ಹೊಸ ಸಂಪರ್ಕಗಳ ವಿತರಣೆಗೆ ಹಸಿರು ನಿಶಾನೆ ತೋರಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ತಂದೆ ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ