AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​-ಇಸ್ರೇಲ್ ಯುದ್ಧದ ತೀವ್ರತೆ ಕಡಿಮೆಯಾದ್ರೂ ತಪ್ಪದ ಸಂಕಷ್ಟ: 6 ತಿಂಗಳಿಂದ ಸಿಗುತ್ತಿಲ್ಲ ಹೊಸ ಎಲ್​​​ಪಿಜಿ ಸಂಪರ್ಕ

ಕಳೆದ ಆರು ತಿಂಗಳಿಂದ ಹೊಸ ಎಲ್‌ಪಿಜಿ ಸಂಪರ್ಕಗಳು ಸ್ಥಗಿತಗೊಂಡಿದ್ದು, ಗ್ರಾಹಕರು ತೀವ್ರ ಪರದಾಟ ನಡೆಸಿದ್ದಾರೆ. ಹೊಸ ಸಿಲಿಂಡರ್‌ಗೆ ಭಾರೀ ಬೇಡಿಕೆಯಿದ್ದರೂ, ಕೇಂದ್ರ ಸರ್ಕಾರದಿಂದ ಇನ್ನೂ ಅನುಮೋದನೆ ದೊರೆತಿಲ್ಲ. ಮಾರ್ಚ್‌ನಿಂದ ಸ್ಥಗಿತಗೊಂಡಿರುವ ಪ್ರಕ್ರಿಯೆ ಪುನರಾರಂಭಗೊಳ್ಳದಿರುವುದರಿಂದ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದು, ಜನರಿಗೆ ತೀವ್ರ ಅನಾನುಕೂಲವಾಗಿದೆ.

ಇರಾನ್​-ಇಸ್ರೇಲ್ ಯುದ್ಧದ ತೀವ್ರತೆ ಕಡಿಮೆಯಾದ್ರೂ ತಪ್ಪದ ಸಂಕಷ್ಟ: 6 ತಿಂಗಳಿಂದ ಸಿಗುತ್ತಿಲ್ಲ ಹೊಸ ಎಲ್​​​ಪಿಜಿ ಸಂಪರ್ಕ
ಗ್ಯಾಸ್​ ಸಿಲಿಂಡರ್​Image Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Aug 28, 2026 | 11:17 PM

Share

ಬೆಂಗಳೂರು, ಆಗಸ್ಟ್​​ 28: ಇಸ್ರೇಲ್-ಇರಾನ್ ನಡುವಿನ ಯುದ್ಧದ ಪರಿಣಾಮ ದೇಶದಲ್ಲಿ ಎದುರಾಗಿದ್ದ ಎಲ್‌ಪಿಜಿ ಗ್ಯಾಸ್ (LPG cylinder) ಅಭಾವ ಸಾರ್ವಜನಿಕರನ್ನು ಇನ್ನಿಲ್ಲದಂತೆ ಕಾಡಿತ್ತು. ಸದ್ಯ ಹಳೆಯ ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ಕೊಂಚ ನಿರಾಳತೆ ತಂದಿದ್ದರೂ, ಹೊಸದಾಗಿ ಗೃಹಬಳಕೆಯ ಎಲ್‌ಪಿಜಿ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿರುವ ಗ್ರಾಹಕರ ಪಾಡು ಮಾತ್ರ ಹೇಳತೀರದಾಗಿದೆ. ಕಳೆದ ಆರು ತಿಂಗಳಿಂದ ಹೊಸ ಸಂಪರ್ಕಗಳ ಹಂಚಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ದಿನಬಳಕೆಯ ಅತ್ಯಗತ್ಯ ವಸ್ತುವಿಗಾಗಿ ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವ ದುಸ್ಥಿತಿ ನಿರ್ಮಾಣವಾಗಿದೆ.

ಹೊಸ ಎಲ್‌ಪಿಜಿ ಸಂಪರ್ಕ ಸಿಗದೆ ಜನರು ಪರದಾಟ

ಹಲವು ತಿಂಗಳ ಹಿಂದೆ ರಾಜ್ಯದಲ್ಲಿ ಎದುರಾಗಿದ್ದ ಎಲ್​​ಪಿಜಿ ಗ್ಯಾಸ್ ಅಭಾವದಿಂದ ನರಳಾಡದ ಜನರಿಲ್ಲ. ಕೊನೆಗೂ ಹೇಗೋ ನಿಧಾನಗತಿಯಲ್ಲಿ ಬೇಡಿಕೆಗೆ ತಕ್ಕಂತೆ ಎಲ್​​​ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ. ಆದರೆ ಮತ್ತೊಂದೆಡೆ ಹೊಸ ಗೃಹ ಬಳಕೆ ಎಲ್​​ಪಿಜಿ ಸಿಲಿಂಡರ್​ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರು ಕಳೆದ 6 ತಿಂಗಳಿಂದ ತೀವ್ರ ನಿರಾಶೆಯಿಂದಲೇ ಕಾಲ ದೂಡುತ್ತಿದ್ದಾರೆ.

ಕೇಂದ್ರದ ಅನುಮೋದನೆಗೆ ಬ್ರೇಕ್: ರಾಶಿ ಬಿದ್ದ ಅರ್ಜಿಗಳು

ಹೊಸ ಗೃಹಬಳಕೆಯ ಸಿಲಿಂಡರ್‌ಗಳಿಗೆ ದಿನೇ ದಿನೆ ಬೇಡಿಕೆ ಹೆಚ್ಚುತ್ತಿದ್ದರೂ, ಕೇಂದ್ರ ಸರ್ಕಾರದಿಂದ ಹೊಸ ಸಂಪರ್ಕಗಳ ಹಂಚಿಕೆಗೆ ಅಗತ್ಯ ಅನುಮೋದನೆ ದೊರೆತಿಲ್ಲ. ಕಳೆದ ಮಾರ್ಚ್ ತಿಂಗಳಿಂದ ಸ್ಥಗಿತಗೊಂಡಿರುವ ಅನುಮೋದನೆ ಪ್ರಕ್ರಿಯೆ ಈವರೆಗೂ ಪುನರಾರಂಭವಾಗಿಲ್ಲ.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಹೊಸ ರೂಲ್ಸ್‌: ಗ್ರಾಹಕರು ಮಾಡಬೇಕಾಗಿದ್ದಿಷ್ಟೇ!

ಇದರ ಪರಿಣಾಮವಾಗಿ ನಗರದ ಬಹುತೇಕ ಪ್ರತಿ ಗ್ಯಾಸ್ ಏಜೆನ್ಸಿಗಳಲ್ಲಿ 200ರಿಂದ 300ಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗದೆ ಧೂಳು ಹಿಡಿಯುತ್ತಿವೆ. ನಿತ್ಯ ಗ್ಯಾಸ್ ಏಜೆನ್ಸಿಗಳಿಗೆ ಜನರು ಎಡತಾಕುತ್ತಿದ್ದಾರೆ.

ಹೊಸದಾಗಿ ಮದುವೆಯಾದ ಕುಟುಂಬಗಳ ಪರದಾಟ

ಕಳೆದ ಆರು ತಿಂಗಳ ಅವಧಿಯಲ್ಲಿ ಮದುವೆಯಾಗಿ ಪ್ರತ್ಯೇಕ ಮನೆ ಮಾಡಿಕೊಂಡವರು ಹಾಗೂ ಉದ್ಯೋಗ ಅರಸಿ ನಗರಕ್ಕೆ ಬಂದು ಹೊಸ ಸಂಸಾರ ಹೂಡಿದ ಕುಟುಂಬಗಳು ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಂಪರ್ಕವಿಲ್ಲದೆ ಅಡುಗೆ ಮಾಡಲು ಹೆಣಗಾಡುತ್ತಿರುವ ಗ್ರಾಹಕರು ದಿಕ್ಕು ತೋಚದಂತಾಗಿದ್ದಾರೆ. ಸಂಕಷ್ಟದಲ್ಲಿರುವ ಈ ಕುಟುಂಬಗಳ ಪರಿಸ್ಥಿತಿಯನ್ನು ಅರಿತು, ಕೇಂದ್ರ ಸರ್ಕಾರವು ಕೂಡಲೇ ಈ ನಿಲುವನ್ನು ಸಡಿಲಿಸಿ ಹೊಸ ಸಂಪರ್ಕಗಳ ವಿತರಣೆಗೆ ಹಸಿರು ನಿಶಾನೆ ತೋರಬೇಕೆಂಬ ಕೂಗು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:52 pm, Fri, 28 August 26

Follow Us
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು