AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪಾಸ್​ಪೋರ್ಟ್ ದಾಖಲೆ​ ಪರಿಶೀಲನೆಗೆ ಹೊಸ ಮಾರ್ಗಸೂಚಿ

ಬೆಂಗಳೂರಿನಲ್ಲಿ ಪಾಸ್​ಪೋರ್ಟ್ ದಾಖಲೆ ಪರಿಶೀಲನೆಯನ್ನು ಜನಸ್ನೇಹಿಯಾಗಿಸಲು ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾರ್ಗಸೂಚಿ ಪ್ರಕಟಿಸಿದ್ದು, ಅಧಿಕಾರಿಗಳು ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಬಾಡಿ-ವೋರ್ನ್ ಕ್ಯಾಮೆರಾ ಧರಿಸುವುದು ಕಡ್ಡಾಯವಾಗಿದೆ. ಇನ್ನೂ ಹಲವು ವಿಷಯಗಳು ಮಾರ್ಗಸೂಚಿಯಲ್ಲಿ ಅಡಕವಾಗಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಪಾಸ್​ಪೋರ್ಟ್ ದಾಖಲೆ​ ಪರಿಶೀಲನೆಗೆ ಹೊಸ ಮಾರ್ಗಸೂಚಿ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: Feb 27, 2026 | 12:20 PM

Share

ಬೆಂಗಳೂರು, ಫೆಬ್ರವರಿ 27: ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ (Passport Verification) ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಬೆಂಗಳೂರು (Bangalore) ನಗರ ಪೊಲೀಸರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ನಿಯಮಗಳನ್ನು ಡಿಜಿ ಹಾಗೂ ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರಕಟಿಸಿದ್ದಾರೆ. ಹೊಸ ಮಾರ್ಗಸೂಚಿಯಂತೆ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಬಾಡಿ-ವೋರ್ನ್ ಕ್ಯಾಮೆರಾ (Body Worn Camera) ಧರಿಸುವುದು ಕಡ್ಡಾಯವಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಪಾಸ್‌ಪೋರ್ಟ್ ಅರ್ಜಿದಾರರನ್ನು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಕರೆಸಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಬದಲಾಗಿ, ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಅರ್ಜಿದಾರರ ವಾಸಸ್ಥಳಕ್ಕೆ ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ನೆರೆಹೊರೆಯವರಿಂದ ಅಗತ್ಯ ಮಾಹಿತಿ ಸಂಗ್ರಹಿಸುವುದೂ ಮಾರ್ಗಸೂಚಿಯ ಭಾಗವಾಗಿದೆ.

ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮುನ್ನ SMS ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡಬೇಕು. ಯಾವುದೇ ರೀತಿಯ ಆಮಿಷ ಅಥವಾ ಹಣದ ನಿರೀಕ್ಷೆ ಇಡಬಾರದು. ಈ ಉದ್ದೇಶಕ್ಕಾಗಿ ಅರ್ಜಿದಾರರಿಗೆ ಕಿರುಕುಳ ನೀಡುವುದು, ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ಸಲ್ಲಿಕೆಯಲ್ಲಿ ವಿಳಂಬ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೂ ಅಂಡಾಣು ಮಾರಾಟ ದಂಧೆ? ಐವಿಎಫ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಗಾಕ್ಕೆ ಆರೋಗ್ಯ ಇಲಾಖೆ ಸೂಚನೆ

ಪ್ರತಿಕೂಲ ವರದಿ ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ಸೂಕ್ತ ಮತ್ತು ಸ್ಪಷ್ಟವಾದ ಪುರಾವೆಗಳನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ. ತರ್ಕಬದ್ಧ ಕಾರಣಗಳಿಲ್ಲದೆ ನಕಾರಾತ್ಮಕ ವರದಿ ಸಲ್ಲಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಎಲ್ಲಾ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ಡಿಸಿಪಿ ವಾರಕ್ಕೊಮ್ಮೆ ವರದಿ ಸಲ್ಲಿಸಬೇಕಾಗಿದೆ. ಮಾರ್ಗಸೂಚಿ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ