AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರದ ಆರ್ಭಟ ಹೆಚ್ಚಾಗಿದೆ. ಕ್ಯಾನ್ಸರ್, ಹೃದಯ ಸಮಸ್ಯೆ, ಥೈರಾಯ್ಡ್, ಹೈಪರ್ ಟೆನ್ಷನ್, ಬಿಪಿ ಹಾಗೂ ಶುಗರ್ ಸಮಸ್ಯೆಯಿಂದ ಬಳಲುತ್ತಿರುವವರ ಜೀವ ನುಂಗಲು ಹೆಮ್ಮಾರಿ ಹೊಂಚು ಹಾಕುತ್ತಿದೆ. ಅದರಲ್ಲೂ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರಿಗೆ ಮತ್ತೆ ಸೊಳ್ಳೆ ಕಚ್ಚಿದರೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆಸ್ಪತ್ರೆಗಳು ಹೊಸ ಪ್ಲಾನ್ ಮಾಡಿಕೊಂಡಿವೆ.

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಪ್ಲಾನ್!
ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಿಂದ ಹೊಸ ಯೋಜನೆ!Image Credit source: Getty Images
Vinay Kashappanavar
| Updated By: Ganapathi Sharma|

Updated on:Jul 22, 2024 | 6:58 AM

Share

ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿ ಈ ವರ್ಷ ನೀರಿಕ್ಷೆಗೂ ಮೀರಿ ಊಹೆಗೂ ಸಿಗದಂತೆ ಡೆಂಗ್ಯೂ ಜ್ವರ ಜನರ ಜೀವ ಹಿಂಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಘೀ ಕೇಸ್ ವರದಿಯಾಗಿವೆ. ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 486 ಪಾಸಿಟಿವ್ ಪ್ರಕರಣ ದಾಖಲಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳು ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರ ಕೂಡಾ 296 ಡೆಂಗ್ಯೂ ಪಾಸಿಟಿವ್ ಕಂಡು ಬಂದಿರುವುದು ಆತಂಕ ಹೆಚ್ಚಿಸಿದೆ.

ಡೆಂಘೀ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ಡೆಂಗ್ಯೂನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳು ಮಾಸ್ಟರ್ ಪ್ಲಾನ್ ಮಾಡಿಕೊಂಡಿವೆ. ಡೆಂಗ್ಯೂ ನಿಯಂತ್ರಣಕ್ಕೆ ಸೊಳ್ಳೆ ಪರದೆಯ ಮೊರೆ ಹೋಗಿವೆ. ಡೆಂಗ್ಯೂ ರೋಗಿಗಳಲ್ಲಿ ಸೋಂಕಿನ ತೀವ್ರತೆ ತಡೆಯಲು ಸೊಳ್ಳೆ ಪರದೆಯನ್ನು ಬಳಕೆ ಮಾಡುತ್ತಿವೆ.

ಡೆಂಗ್ಯೂ ಬಂದವರಿಗೆ ಸೊಳ್ಳೆ ಪರದೆಯಿಂದ ಏನುಪಯೋಗ?

ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರಿಗೆ ಗುಣಮುಖರಾಗುವ ಹೊತ್ತಿನಲ್ಲಿ ಮತ್ತೆ ಡೆಂಗ್ಯೂ ಸೊಳ್ಳೆ ಕಚ್ಚಿದರೆ ಸೋಂಕು ಹೆಚ್ಚು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಜಯನಗರ ಸಾರ್ವಜನಿಕ ಆಸ್ಪತ್ರೆಯು ಡೆಂಗ್ಯೂ ವಾರ್ಡ್​​ಗಳಿಗೆ ಹಾಗೂ ಜ್ವರದ ಪ್ರಕರಣಗಳಿಂದ ದಾಖಲಾದ ರೋಗಿಗಳ ಬೆಡ್​​ಗೆ ಸೊಳ್ಳೆ ಪರದೆ ಹಾಕಿದೆ. ಜೊತೆಗೆ ಆಸ್ಪತ್ರೆಗೆ ಬರುವ ಇತರೆ ರೋಗಿಗಳು, ಜನರಿಗೂ ಡೆಂಘಿಯಿಂದ ರಕ್ಷಣೆ ನೀಡಲು ಸೊಳ್ಳೆ ಔಷಧ ನಿಯಂತ್ರಕ ರಿಪ್ಲೀಕೆಂಟ್ ಅಳವಡಿಸಿದೆ. ಡೆಂಗ್ಯೂ ಆಸ್ಪತ್ರೆಗಳಿಂದ ಹರಡದಂತೆ ಹಾಗೂ ಸೊಳ್ಳೆಗಳು ಬರದಂತೆ ತಡೆಯಲು ಜಯನಗರ ಆಸ್ಪತ್ರೆ ಮುಂದಾಗಿದೆ. ಈ ಬಗ್ಗೆ ಜಯನಗರ ಸರ್ವಾಜನಿಕ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ ನಾಗಮೂರ್ತಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬರದ ಗೃಹಲಕ್ಷ್ಮಿ ಹಣ; ಸಿದ್ದರಾಮಯ್ಯ ಸರ್ಕಾರಕ್ಕೆ ಹಿಡಿಶಾಪ ಹಾಕ್ತಿರುವ ಮಹಿಳೆಯರು

ರಾಜ್ಯದಲ್ಲಿ ಡೆಂಗ್ಯೂ ಮತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೋಮಾರ್ಬಿಟಿಸ್ ಜೊತೆಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಹೆಚ್ಚು ಎಚ್ಚರವಹಿಸಬೇಕಿದೆ ಎಂದು ವೈದ್ಯರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:58 am, Mon, 22 July 24