AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು

ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಪ್ರಸನ್ನ ಹೆಗಡೆ
|

Updated on: Oct 23, 2025 | 7:28 PM

Share

ಬೆಂಗಳೂರು, ಅಕ್ಟೋಬರ್​ 23: ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಗುಡ್​ ನ್ಯೂಸ್​ ಕೊಟ್ಟಿದ್ದಾರೆ. ಬೆಂಗಳೂರಿನಿಂದ (Bengaluru) ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ, ಸಂಸದ ಪ್ರಹ್ಲಾದ್​ ಜೋಶಿಯವರು ಅಕ್ಟೋಬರ್​ 16, 2025ರಂದು ಸಲ್ಲಿಸಿದ್ದ ಮನವಿಯನ್ನ ಉಲ್ಲೇಖಿಸಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಮುಂಚೆ ಬೆಂಗಳೂರು-ಮುಂಬಯಿ ಮಧ್ಯೆ ಸಂಪರ್ಕ ಕಲ್ಪಿಸಲು ಉದ್ಯಾನ ಎಕ್ಸ್ ಪ್ರೆಸ್ ಮಾತ್ರ ಸಂಚಾರ ನಡೆಸುತ್ತಿತ್ತು. ಅದು ಬೆಂಗಳೂರಿನಿಂದ ಗುಂಟಕಲ್ – ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ, ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಒಪ್ಪಿಗೆ ಸೂಚಿಸಿದ್ದು, ಅದಕ್ಕೀಗ ಅನುಮೋದನೆಯೂ ಸಿಕ್ಕಿದೆ.

ಇದನ್ನೂ ಓದಿ: ರೈಲಿನ ಶೌಚಾಲಯದಲ್ಲಿ 6 ಗಂಟೆಗಳ ಕಾಲ ಲಾಕ್ ಆದ ಪ್ರಯಾಣಿಕ, ಮುಂದೆ ಆಗಿದ್ದೇ ಬೇರೆ 

ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ

ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಿರುವ ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ ತಿಳಿಸಿದ್ದಾರೆ. ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!