AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು

ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಪ್ರಸನ್ನ ಹೆಗಡೆ
|

Updated on: Oct 23, 2025 | 7:28 PM

Share

ಬೆಂಗಳೂರು, ಅಕ್ಟೋಬರ್​ 23: ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಗುಡ್​ ನ್ಯೂಸ್​ ಕೊಟ್ಟಿದ್ದಾರೆ. ಬೆಂಗಳೂರಿನಿಂದ (Bengaluru) ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ, ಸಂಸದ ಪ್ರಹ್ಲಾದ್​ ಜೋಶಿಯವರು ಅಕ್ಟೋಬರ್​ 16, 2025ರಂದು ಸಲ್ಲಿಸಿದ್ದ ಮನವಿಯನ್ನ ಉಲ್ಲೇಖಿಸಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಮುಂಚೆ ಬೆಂಗಳೂರು-ಮುಂಬಯಿ ಮಧ್ಯೆ ಸಂಪರ್ಕ ಕಲ್ಪಿಸಲು ಉದ್ಯಾನ ಎಕ್ಸ್ ಪ್ರೆಸ್ ಮಾತ್ರ ಸಂಚಾರ ನಡೆಸುತ್ತಿತ್ತು. ಅದು ಬೆಂಗಳೂರಿನಿಂದ ಗುಂಟಕಲ್ – ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ, ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಒಪ್ಪಿಗೆ ಸೂಚಿಸಿದ್ದು, ಅದಕ್ಕೀಗ ಅನುಮೋದನೆಯೂ ಸಿಕ್ಕಿದೆ.

ಇದನ್ನೂ ಓದಿ: ರೈಲಿನ ಶೌಚಾಲಯದಲ್ಲಿ 6 ಗಂಟೆಗಳ ಕಾಲ ಲಾಕ್ ಆದ ಪ್ರಯಾಣಿಕ, ಮುಂದೆ ಆಗಿದ್ದೇ ಬೇರೆ 

ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ

ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಿರುವ ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ ತಿಳಿಸಿದ್ದಾರೆ. ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು