AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು

ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು.

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು
ಪ್ರಸನ್ನ ಹೆಗಡೆ
|

Updated on: Oct 23, 2025 | 7:28 PM

Share

ಬೆಂಗಳೂರು, ಅಕ್ಟೋಬರ್​ 23: ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಗುಡ್​ ನ್ಯೂಸ್​ ಕೊಟ್ಟಿದ್ದಾರೆ. ಬೆಂಗಳೂರಿನಿಂದ (Bengaluru) ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸಲಿರುವ ಸೂಪರ್​ ಫಾಸ್ಟ್​ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಸ್ವತಃ ಸಚಿವರೇ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವ, ಸಂಸದ ಪ್ರಹ್ಲಾದ್​ ಜೋಶಿಯವರು ಅಕ್ಟೋಬರ್​ 16, 2025ರಂದು ಸಲ್ಲಿಸಿದ್ದ ಮನವಿಯನ್ನ ಉಲ್ಲೇಖಿಸಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಮುಂಚೆ ಬೆಂಗಳೂರು-ಮುಂಬಯಿ ಮಧ್ಯೆ ಸಂಪರ್ಕ ಕಲ್ಪಿಸಲು ಉದ್ಯಾನ ಎಕ್ಸ್ ಪ್ರೆಸ್ ಮಾತ್ರ ಸಂಚಾರ ನಡೆಸುತ್ತಿತ್ತು. ಅದು ಬೆಂಗಳೂರಿನಿಂದ ಗುಂಟಕಲ್ – ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ, ಬೆಂಗಳೂರು-ಮುಂಬಯಿ ನಗರಗಳನ್ನು ಸಂಪರ್ಕಿಸುವ ಇನ್ನೊಂದು ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಓಡಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್​ ಜೋಶಿ ಮನವಿ ಮಾಡಿದ್ದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ , ತೇಜಸ್ವಿ ಸೂರ್ಯ ಸಾಥ್​ ಕೊಟ್ಟಿದ್ದರು. ಮನವಿಗೆ ಸ್ಪಂದಿಸಿದ ರೈಲ್ವೇ ಸಚಿವರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಒಪ್ಪಿಗೆ ಸೂಚಿಸಿದ್ದು, ಅದಕ್ಕೀಗ ಅನುಮೋದನೆಯೂ ಸಿಕ್ಕಿದೆ.

ಇದನ್ನೂ ಓದಿ: ರೈಲಿನ ಶೌಚಾಲಯದಲ್ಲಿ 6 ಗಂಟೆಗಳ ಕಾಲ ಲಾಕ್ ಆದ ಪ್ರಯಾಣಿಕ, ಮುಂದೆ ಆಗಿದ್ದೇ ಬೇರೆ 

ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ

ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಿರುವ ರೈಲ್ವೇ ಸಚಿವರಿಗೆ ಪ್ರಹ್ಲಾದ್​ ಜೋಶಿ ಧನ್ಯವಾದ ತಿಳಿಸಿದ್ದಾರೆ. ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ