AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಷ್ಮನ್ ಕಿದರ ಹೈ ಅಂದ್ರೆ ಬಗಲ್ ಮೇ ಹೈ: ಅಕ್ಕಪಕ್ಕದವರ ಮನೆಯವರ ವಾಹನಗಳ ವಿರುದ್ಧ ದೂರು

abandoned vehicles Bangaluru: ಬೆಂಗಳೂರಿನಲ್ಲಿ ಪುಟ್‌ಪಾತ್ ಮತ್ತು ರಸ್ತೆ ಬದಿ ನಿಲ್ಲಿಸಿದ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಬೇರೆಯವರ ವಾಹನಗಳ ಫೋಟೋ ತೆಗೆದು ಪಬ್ಲಿಕ್ ಐ ಆ್ಯಪ್​​ನಲ್ಲಿ ಅಪ್‌ಲೋಡ್​ ಮಾಡಿರುವುದು​ ಪತ್ತೆಯಾಗಿದೆ. ವಾಹನಗಳ ಪರಿಶೀಲನೆ ವೇಳೆ ಪೊಲೀಸರೇ ಶಾಕ್​ ಆಗಿದ್ದಾರೆ.

ದುಷ್ಮನ್ ಕಿದರ ಹೈ ಅಂದ್ರೆ ಬಗಲ್ ಮೇ ಹೈ: ಅಕ್ಕಪಕ್ಕದವರ ಮನೆಯವರ ವಾಹನಗಳ ವಿರುದ್ಧ ದೂರು
ಬಿಡಾಡಿ ವಾಹನImage Credit source: tv9 kannada
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 08, 2026 | 3:21 PM

Share

ಬೆಂಗಳೂರು, ಆಗಸ್ಟ್​​ 08: ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ಅನಾಥವಾಗಿ ನಿಲ್ಲಿಸಲಾಗಿರುವ ಬಿಡಾಡಿ ವಾಹನಗಳನ್ನು (abandoned vehicles) ತೆರವುಗೊಳಿಸಲು ನಗರ ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಅಚ್ಚರಿ ಹಾಗೂ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ಸಾರ್ವಜನಿಕರು ಆ್ಯಪ್‌ಗಳ ಮೂಲಕ ನೀಡಿದ ದೂರುಗಳನ್ನಾಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ವೈಯಕ್ತಿಕ ದ್ವೇಷ ಹಿನ್ನಲೆ ಅಕ್ಕ-ಪಕ್ಕದ ಮನೆಯವರ ವಾಹನಗಳ ಫೋಟೋವನ್ನು ಅಪ್‌ಲೋಡ್​ ಮಾಡಿರುವುದು​ ಪತ್ತೆಯಾಗಿದೆ.

ನಡೆದಿದ್ದೇನು?

ಪಬ್ಲಿಕ್ ಐ ಆ್ಯಪ್ ಮೂಲಕ ಸಾರ್ವಜನಿಕರು ಬಿಡಾಡಿ ವಾಹನಗಳ ಬಗ್ಗೆ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕೆಲವರು ತಮ್ಮ ಅಕ್ಕಪಕ್ಕದ ಮನೆಯವರ ಮೇಲಿನ ವೈಯಕ್ತಿಕ ದ್ವೇಷದಿಂದಾಗಿ, ಅವರು ಸಾಧಾರಣವಾಗಿ ಪಾರ್ಕ್ ಮಾಡಿದ್ದ ಕಾರುಗಳ ಫೋಟೋ ತೆಗೆದು ಬಿಡಾಡಿ ವಾಹನಗಳು ಎಂದು ಅಪ್‌ಲೋಡ್ ಮಾಡಿದ್ದಾರೆ.

ಇದನ್ನೂ ಓದಿ: ರಸ್ತೆ ಬದಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ವಾಹನಗಳ ಹರಾಜಿಗೆ ಸಿದ್ಧತೆ: GBA ಮತ್ತು ಪೊಲೀಸರಿಂದ ಭರ್ಜರಿ ಜಂಟಿ ಕಾರ್ಯಾಚರಣೆ!

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಅವು ನೆರೆಹೊರೆಯವರ ಸಕ್ರಿಯ ವಾಹನಗಳು ಎಂಬುದು ತಿಳಿದುಬಂದಿದೆ. ಇದೇ ರೀತಿ ವ್ಯಾಪಾರಿಗಳು ಹಾಗೂ ಹೋಟೆಲ್ ಮಾಲೀಕರು ಸಹ ತಮ್ಮ ಎದುರಾಳಿ ಅಂಗಡಿ ಅಥವಾ ಹೋಟೆಲ್‌ಗಳಿಗೆ ಬರುವ ಗ್ರಾಹಕರ ವಾಹನಗಳ ಫೋಟೋ ತೆಗೆದು ಆ್ಯಪ್‌ನಲ್ಲಿ ಹಾಕಿರುವುದು ಕಂಡುಬಂದಿದೆ.

ಇಲ್ಲಿಯವರೆಗೆ ಒಟ್ಟು 6,544 ವಾಹನಗಳ ಬಗ್ಗೆ ದೂರುಗಳು ದಾಖಲಾಗಿವೆ. ಇದರಲ್ಲಿ ಸಾರ್ವಜನಿಕರು ಪಬ್ಲಿಕ್ ಐ ಆ್ಯಪ್ ಮೂಲಕ 4,108 ವಾಹನಗಳ ವಿವರ ನೀಡಿದ್ದರೆ, ಕರ್ತವ್ಯನಿರತ ಪೊಲೀಸರು ಸ್ವತಃ 2,436 ವಾಹನಗಳನ್ನು ಗುರುತಿಸಿ ರಿಪೋರ್ಟ್ ಮಾಡಿದ್ದಾರೆ. ಈ ಎಲ್ಲಾ ವರದಿಗಳನ್ನು ಪೊಲೀಸರು ಮತ್ತು ಜಿಬಿಎ  ಅಧಿಕಾರಿಗಳು ಕೂಲಂಕುಷವಾಗಿ ತನಿಖೆ ಹಾಗೂ ಪರಿಶೀಲನೆ ನಡೆಸಿದ ನಂತರ, 3,100 ವಾಹನಗಳನ್ನು ಅಂತಿಮವಾಗಿ ಬಿಡಾಡಿ ವಾಹನಗಳು ಎಂದು ಗುರುತಿಸಲಾಗಿದೆ.

352 ವಾಹನಗಳ ಟೋಯಿಂಗ್

ಇನ್ನು ಗುರುತಿಸಲಾದ ವಾಹನಗಳ ಪೈಕಿ 1,780 ವಾಹನಗಳಿಗೆ ಜಿಬಿಎ ಅಧಿಕಾರಿಗಳು ಅನುಮೋದನೆ ನೀಡಿ, ಸೂಚನಾ ಸ್ಟಿಕ್ಕರ್‌ಗಳನ್ನು ಅಂಟಿಸಿದ್ದಾರೆ. ಪೊಲೀಸರು ದಿನವೊಂದಕ್ಕೆ 50 ರಿಂದ 100 ಬಿಡಾಡಿ ಹಾಗೂ ನೋ-ಪಾರ್ಕಿಂಗ್ ವಾಹನಗಳಿಗೆ ಸ್ಟಿಕ್ಕರಿಂಗ್ ಮಾಡುತ್ತಿದ್ದಾರೆ. ನೋಟಿಸ್ ಸ್ಟಿಕ್ಕರ್ ಅಂಟಿಸಿದ 7 ದಿನಗಳ ನಂತರವೂ ಮಾಲೀಕರು ಬರದಿದ್ದರೆ ಆ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತದೆ. ಈಗಾಗಲೇ 352 ವಾಹನಗಳ ಟೋಯಿಂಗ್ ಕಾರ್ಯ ಪೂರ್ಣಗೊಂಡಿದ್ದು, 600 ವಾಹನಗಳ ಮಾಲೀಕರು ನೋ-ಪಾರ್ಕಿಂಗ್ ದಂಡ ಪಾವತಿಸಿ ತಮ್ಮ ವಾಹನಗಳನ್ನು ಬಿಡಿಸಿಕೊಳ್ಳುತ್ತಿದ್ದಾರೆ.

ಯಾವ ವಾಹನಕ್ಕೆ ಎಷ್ಟು ದಂಡ?

ಟೋಯಿಂಗ್ ಮಾಡಿದ ವಾಹನಗಳಿಗೆ ವೀಲ್ ಕ್ಯಾಪ್ ಅಳವಡಿಸಿ, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ವಾಹನ ಮಾಲೀಕರಿಗೆ ದಂಡ ಪಾವತಿಸಲು 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ದ್ವಿಚಕ್ರ ವಾಹನಗಳಿಗೆ 500 ನೋ-ಪಾರ್ಕಿಂಗ್ ದಂಡದ ಜೊತೆಗೆ 650 ಟೋಯಿಂಗ್ ಶುಲ್ಕ, ಹಾಗೂ ನಾಲ್ಕು ಚಕ್ರದ ವಾಹನಗಳಿಗೆ 1,000 ನೋ-ಪಾರ್ಕಿಂಗ್ ದಂಡದ ಜೊತೆಗೆ ನಿಗದಿತ ಟೋಯಿಂಗ್ ಶುಲ್ಕ ವಿಧಿಸಲಾಗುತ್ತಿದೆ.

ಇದನ್ನೂ ಓದಿ: ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ

ಒಂದು ವೇಳೆ ಕೊಟ್ಟಿರುವ 15 ದಿನಗಳ ಗಡುವು ಮುಗಿದರೂ ವಾಹನ ಮಾಲೀಕರು ಬಂದು ವಾಹನಗಳನ್ನು ವಶಕ್ಕೆ ಪಡೆಯದಿದ್ದರೆ, ಜಿಬಿಎ ಅಧಿಕಾರಿಗಳು ಅಂತಹ ವಾಹನಗಳನ್ನು ಹರಾಜು ಹಾಕುವುದು ಸೇರಿದಂತೆ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ಅಶೋಕ್
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ