AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2023: ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಅಲಂಕಾರದಲ್ಲಿ ದೇವರ ದರ್ಶನ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಜನರ ಭೇಟಿ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ.

New Year 2023: ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ, ವಿಶೇಷ ಅಲಂಕಾರದಲ್ಲಿ ದೇವರ ದರ್ಶನ
ಹೊಸ ವರ್ಷದ ಮೊದಲ ದಿನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ
TV9 Web
| Edited By: |

Updated on:Jan 01, 2023 | 10:11 AM

Share

ಬೆಂಗಳೂರು: ಇಂದು ಹೊಸ ವರ್ಷದ ಮೊದಲ ದಿನ. ಕ್ಯಾಲೆಂಡರ್ ಬದಲಾಯಿಸುವ ದಿನ. ಕಳೆದು ಹೋದ ದಿನ, ಕಹಿ ನೆನಪು, ನೋವು ಎಲ್ಲವನ್ನೂ ಮರೆತು. ಹೊಸ ಹರುಷದಿಂದ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗಿದೆ. ಸದ್ಯ ಬೆಂಗಳೂರಿಗರು ಹೊಸ ವರ್ಷದ ಮೊದಲ ದಿನದಂದು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಕೈ ಮುಗಿದು ದೇವರಲ್ಲಿ ಬೇಡಿ ಹೊಸ ವರ್ಷ ಸುಖ, ಸಂತೋಷ, ನೆಮ್ಮದಿ ತೆರಳಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಜನರ ಭೇಟಿ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಭಿಷೇಕ, ಪಂಚಾಭಿಷೇಕ, ಪುಷ್ಪಾಭಿಷೇಕ ನೆರವೇರಿದ್ದು ಇದನ್ನು ಕಣ್ತುಂಬಿಕೊಂಡ ಭಕ್ತರು ಪುನೀತರಾಗಿದ್ದಾರೆ. ಶಿರಡಿ ಸಾಯಿ ಬಾಬಾ, ಗಣೇಶ ದೇವಸ್ಥಾನ, ಗವಿ ಗಂಗಾಧರ ದೇವಸ್ಥಾನ, ಬನಶಂಕರಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಅರ್ಚಕರು ತೀರ್ಥ, ಪ್ರಸಾದ ವಿತರಿಸುತ್ತಿದ್ದಾರೆ. ಇಂದು ದೇವರಿಗೆ ವಿಶೇಷ ಅಲಂಕಾರ ಜೊತೆಗೆ ಹೋಮ ಹವನ ಮಾಡಲಾಗುತ್ತಿದೆ.

ಇನ್ನು ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ರಾತ್ರಿ 9 ಗಂಟೆಯವರೆಗೂ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ ಕಲ್ಯಾಣೋತ್ಸವ ನೆರವೇರಲಿದ್ದು ಕೊವಿಡ್ ರೂಲ್ಸ್ ಗಳನ್ನ ಪಾಲನೆ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿ ಭಕ್ತದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಹೊಸ ವರ್ಷದ ಮೊದಲ‌ ದಿನ ದೇವರ ದರ್ಶನಕ್ಕೆ ಭಕ್ತರ ದಂಡು

ಬನಶಂಕರಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ. ಬೆಳಗ್ಗೆಯಿಂದಲೇ ಬನಶಂಕರಿ ದೇವಸ್ಥಾನದಲ್ಲಿ ವಿವಿಧ ಪೂಜೆಗಳನ್ನು ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ಇಂದು ಬಳೆ ಅಲಂಕಾರ ಜೊತೆಗೆ ಹೋಮ ಹವನ ಮಾಡಲಾಗಿದೆ.

ಇಸ್ಕಾನ್ ದೇವಾಲಯದಲ್ಲಿ ಬೆಳಗ್ಗೆ 4 ಗಂಟೆಯಿಂದ ವಿಶೇಷ ಪೂಜೆ

ಬೆಂಗಳೂರಿನ ರಾಜಾಜಿನಗರದಲ್ಲಿರುವ ಇಸ್ಕಾನ್ ದೇವಾಲಯದಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ವಿಶೇಷ ಪೂಜೆಗಳು ಆರಂಭವಾಗಿವೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಇಸ್ಕಾನ್​ನ ರಾಧ ಕೃಷ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಇಂದು ಇಸ್ಕಾನ್ ನಲ್ಲಿ 9 ಗಂಟೆಗೆ ಲೋಕಕಲ್ಯಾಣಕ್ಕಾಗಿ ಶ್ರೀ ನರಸಿಂಹಸ್ವಾಮಿ ಹೋಮ ಮಾಡಲಾಗಿದೆ. ನಾಳೆ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಕಳೆದ ವರ್ಷ 70 ರಿಂದ 80 ಸಾವಿರ ಭಕ್ತರು ಆಗಮಿಸಿ ದರ್ಶನ ಪಡೆದಿದ್ದರು.

ಚಾಮುಂಡಿಬೆಟ್ಟದಲ್ಲೂ ಭಕ್ತ ಸಾಗರ

ಹೊಸ ವರ್ಷ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೈಸೂರು, ಮಂಡ್ಯ, ಬೆಂಗಳೂರು, ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ. ವರ್ಷದ ಮೊದಲ ದಿನ ನಾಡದೇವತೆ ತಾಯಿ ದರ್ಶನ ಪಡೆದರೆ ಒಳಿತು ಅನ್ನೋ ನಂಬಿಕೆ ಇದೆ.

ಮಲೆ ಮಹದೇಶ್ವರಬೆಟ್ಟದಲ್ಲಿ ಜನವೋ ಜನ

ಹೊಸ ವರ್ಷದಂದು ಮಲೆ ಮಹದೇಶ್ವರಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ಭಕ್ತರು ಮುಂಜಾನೆಯಿಂದಲೇ ಸಾಲಿನಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಭಕ್ತಿ, ಶ್ರದ್ಧೆಯಿಂದ ಮಾದಪ್ಪನಿಗೆ ಕೈಮುಗಿದು ದರ್ಶನ ಪಡೆಯುತ್ತಿದ್ದಾರೆ. ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಮೇಲುಕೋಟೆಗೆ ನಿರ್ಬಂಧ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ನಿರ್ಬಂಧ ಹೇರಲಾಗಿದೆ. ಮೇಲುಕೋಟೆ ಧನುಷ್​ ಕೋಟೆ, ರಾಯಗೋಪುರ, ಪಂಚಕಲ್ಯಾಣಿ, ತೊಟ್ಟಿಲಮಡು, ಬೆಟ್ಟದ ತಪ್ಪಲು, ಪಾಂಡವಪುರ ತಾಲೂಕಿನ ಕುಂತಿಬೆಟ್ಟ, ಕೆರೆತೊಣ್ಣೂರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಪಾಂಡವಪುರ ತಹಶೀಲ್ದಾರ್ ಶ್ವೇತಾ ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Sun, 1 January 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ