Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆ: ಬೆಂಗಳೂರು ಎಂಜಿ ರಸ್ತೆ ಬಂದ್, ಪಬ್​ಗಳ ಮುಂದೆ ಕ್ಯೂನಿಂತ ಜನರು

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೌಂಟ್​ಡೌನ್ ಶುರುವಾಗಿದೆ. ಸದ್ಯ ಬ್ಯಾರಿಕೇಡ್​​ಗಳಿಂದ ಎಂ.ಜಿ.ರಸ್ತೆಯ ಪ್ರವೇಶದ್ವಾರ ಸಂಪೂರ್ಣ ಬಂದ್​ ಮಾಡಲಾಗಿದ್ದು, ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ. ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್ ಎಂಟ್ರಿಯಾಗುವ ರಸ್ತೆ ಬಂದ್ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅವಕಾಶ, ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೊಸ ವರ್ಷಾಚರಣೆ: ಬೆಂಗಳೂರು ಎಂಜಿ ರಸ್ತೆ ಬಂದ್, ಪಬ್​ಗಳ ಮುಂದೆ ಕ್ಯೂನಿಂತ ಜನರು
ಎಂ.ಜಿ.ರಸ್ತೆ ಬಂದ್
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Dec 31, 2023 | 7:19 PM

ಬೆಂಗಳೂರು, ಡಿಸೆಂಬರ್​​ 31: ನಗರದಲ್ಲಿ ಹೊಸ ವರ್ಷಾಚರಣೆಗೆ (New Year 2024) ಕೌಂಟ್​ಡೌನ್ ಶುರುವಾಗಿದೆ. ಸಮಯವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಈಗಾಗಲೇ ಬ್ರಿಗೇಡ್ ರಸ್ತೆಯಲ್ಲಿ ಕಿಕ್ಕಿರುದು ಜನರು ತುಂಬಿದ್ದು, 12 ಗಂಟೆ ಅಷ್ಟರಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಸದ್ಯ ಬ್ಯಾರಿಕೇಡ್​​ಗಳಿಂದ ಎಂ.ಜಿ.ರಸ್ತೆಯ ಪ್ರವೇಶದ್ವಾರ ಸಂಪೂರ್ಣ ಬಂದ್​ ಮಾಡಲಾಗಿದ್ದು, ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗಿದೆ.

ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್ ಎಂಟ್ರಿಯಾಗುವ ರಸ್ತೆ ಬಂದ್ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅವಕಾಶ, ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಬಾರಿ ಪೊಲೀಸರಿಗೆ ಜನರ ನಿಯಂತ್ರಣವೇ ದೊಡ್ಡ ಸವಾಲಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯಿದ್ದು, ಬ್ರಿಗೇಡ್ ರಸ್ತೆಯಲ್ಲಿ ಈಗಾಗಲೇ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಕಪಲ್ ಟಿಕೆಟ್​ ಶೇ‌. 25ರಷ್ಟು ದರ ಏರಿಕೆ

ಸಂಜೆ 6 ಗಂಟೆಯಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್​ಗೆ ಯುವ ಸಮೂಹ ಆಗಮಿಸುತ್ತಿದೆ. ಫ್ಯಾಮಿಲಿ, ಫ್ರೆಂಡ್ಸ್ ಜೊತೆ ಆಗಮಿಸಿದ ಯುವತಿಯರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಚರ್ಚ್​ಸ್ಟ್ರೀಟ್​ನ ಬಹುತೇಕ ಪಬ್​ಗಳ ಮುಂದೆ ಗ್ರಾಹಕರು ಕ್ಯೂನಿಂತಿದ್ದಾರೆ. ಮಾಸ್ಕ್ ಧರಿಸಿ, ಮುಖ ಮುಚ್ಚಿಕೊಂಡು  ಕೆಲವರು ಓಡಾಡುತ್ತಿದ್ದಾರೆ.

ಮೊದಲ ಬಾರಿಗೆ ಮೊಬೈಲ್ ಫೈರ್ ಕಿಟ್ ಬಳಕೆ

ನಗರದಲ್ಲಿ ಇದೇ ಮೊದಲ ಬಾರಿಗೆ ಮೊಬೈಲ್ ಫೈರ್ ಕಿಟ್ ಬಳಕೆ ಮಾಡಲಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ತುರ್ತು ಅಗ್ನಿ ಅವಘಡದ ವೇಳೆ 10ಕ್ಕೂ ಹೆಚ್ಚು ಮೊಬೈಲ್ ಫೈರ್ ಕಿಟ್ ಬಳಕೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬೆಸ್ಕಾಂ ಸಿಬ್ಬಂದಿಯ ನಿಯೋಜನೆ ಮಾಡಲಾಗಿದ್ದು, ವಿದ್ಯುತ್ ಸ್ಥಗಿತಗೊಂಡರೆ ತಕ್ಷಣ ಸ್ಥಳಕ್ಕೆ ತಂಡ ಧಾವಿಸಲಿದೆ.

ಮಹಿಳೆಯರ ಸುರಕ್ಷತೆಗಾಗಿ ಹೆಚ್ಚು ಒತ್ತು: ಡಿಸಿಪಿ ಶೇಖರ್

ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶೇಖರ್​​ ಪ್ರತಿಕ್ರಿಯೆ ನೀಡಿದ್ದು, ಹೆಚ್ಚುವರಿ ಭದ್ರತೆಗಾಗಿ ನಾಲ್ವರು ಡಿಸಿಪಿ, 3000 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಈ ಬಾರಿ ಮಹಿಳೆಯರ ಸುರಕ್ಷತೆಗಾಗಿ ಹೆಚ್ಚು ಒತ್ತು ನೀಡಲಾಗಿದೆ.

ಮಹಿಳೆಯರಿಗಾಗಿ ಪ್ರತ್ಯೇಕ ಬ್ಯಾರಿಕೇಡ್​​ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಸುರಕ್ಷತಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುವರಿ ಸಿಸಿಕ್ಯಾಮರಾ ಅಳವಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Sun, 31 December 23

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ