AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Guidelines: ಸಂಜೆ 6ಕ್ಕೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗೆ ಬ್ಯಾರಿಕೇಡ್, ರಾತ್ರಿ 10ಕ್ಕೆ ಎಲ್ಲವೂ ಬಂದ್: ಬೆಂಗಳೂರು ಪೊಲೀಸರ ಸೂಚನೆ

ಟಿಕೆಟ್ ಬುಕ್ ಮಾಡಿರುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ತೆಗೆದುಕೊಂಡಿರಬೇಕು.

New Year Guidelines: ಸಂಜೆ 6ಕ್ಕೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗೆ ಬ್ಯಾರಿಕೇಡ್, ರಾತ್ರಿ 10ಕ್ಕೆ ಎಲ್ಲವೂ ಬಂದ್: ಬೆಂಗಳೂರು ಪೊಲೀಸರ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 30, 2021 | 10:32 PM

Share

ಬೆಂಗಳೂರು: ಹೊಸವರ್ಷದ ಮುನ್ನಾ ದಿನವಾದ ಶುಕ್ರವಾರ (ಡಿ.31) ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗೆ ಸಂಜೆ 6 ಗಂಟೆಗೆ ಬ್ಯಾರಿಕೇಡ್ ಹಾಕಲಾಗುತ್ತದೆ. ಪಬ್, ರೆಸ್ಟೊರೆಂಟ್​ಗಳಲ್ಲಿ ಮುಂಗಡ ಕಾಯ್ದಿರಿಸಿಕೊಂಡಿದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್ ಹೇಳಿದರು. ಟಿಕೇಟ್ ಬುಕ್ಕಿಂಗ್ ಮೆಸೇಜ್ ಪರಿಶೀಲಿಸಿದ ನಂತರವೇ ಜನರನ್ನು ಒಳಗೆ ಬಿಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಸುಮ್ಮನೆ ಯಾರೊಬ್ಬರಿಗೂ ಅವಕಾಶ ನೀಡುವುದಿಲ್ಲ. ಟಿಕೆಟ್ ಬುಕ್ ಮಾಡಿರುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ತೆಗೆದುಕೊಂಡಿರಬೇಕು. ಎರಡೂ ರಸ್ತೆಗಳಲ್ಲಿ ಎಲ್ಲ ಅಂಗಡಿಗಳು, ಪಬ್, ಬಾರ್, ರೆಸ್ಟೊರೆಂಟ್​ಗಳನ್ನು ರಾತ್ರಿ 10 ಗಂಟೆಗೆ ಬಂದ್ ಮಾಡಲಾಗುತ್ತದೆ. ಅವಧಿ ಮೀರಿಯೂ ತೆರೆದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ. ಎಂಜಿ ರಸ್ತೆಯಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಕನ್ನಡಪರ ಸಂಘಟನೆಗಳು ಮತ್ತು ನಾಯಕರು ಬಂದ್ ಹಿಂಪಡೆದಿದ್ದಾರೆ. ಆದರೆ ಜಾಥಾ ನಡೆಸುತ್ತಾರೆ ಎಂಬ ಮಾಹಿತಿಯಿದೆ. ಈವರೆಗೂ ನಾವು ಯಾವುದೇ ಅನುಮತಿ ಕೊಟ್ಟಿಲ್ಲ. ಕಚೇರಿ ಅನುಮತಿ ಪಡೆಯಲು ಬರುತ್ತೇವೆ ಎಂದಿದ್ದಾರೆ. ಒಂದು ವೇಳೆ ಅನುಮತಿ ಕೋರಿದರೆ ಜಾಥಾ ನಡೆಸಲು ಅವಕಾಶ ನೀಡುವ ಕುರಿತು ಪರಿಶೀಲಿಸುತ್ತೇವೆ ಎಂದರು.

ಈಗಾಗಲೇ ಲಭ್ಯವಿರುವ ಮಾಹಿತಿಯಂತೆ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್, ಮೆಜೆಸ್ಟಿಕ್, ಆನಂದರಾವ್ ಸರ್ಕಲ್ ಮೂಲಕ‌ ಜಾಥಾ ಫ್ರೀಡಂ ಪಾರ್ಕ್ ತಲುಪಲಿದೆ. ನಾವು ಎಲ್ಲ ರೀತಿಯ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಎಷ್ಟು ಜನ ಸೇರುತ್ತಾರೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ಕೋವಿಡ್ ನಿಯಾಮಾವಳಿಗಳ ಪಾಲನೆ ಮಾಡಬೇಕಿದೆ ಎಂದು ಸ್ಪಷ್ಟಪಡಿಸಿದರು.

ನಿಯಮ ಪಾಲನೆ ಕಡ್ಡಾಯ: ಬಿಬಿಎಂಪಿ ಆಯುಕ್ತ ಹೊಸ ವರ್ಷದ ಸಂಭ್ರಮದಲ್ಲಿಯೂ ಕೊವಿಡ್ ನಿಯಮ ಪಾಲನೆ ಕಡ್ಡಾಯವಾಗಿ ಆಗಬೇಕು. ಕೊವಿಡ್ ನಿಯಮ ಉಲ್ಲಂಘನೆಯಾದರೆ ಮುಂದೆ ಮೂರನೇ ಅಲೆ ಹೆಚ್ಚಾಗಬಹುದು. ಹೆಲ್ತ್ ಇನ್​ಸ್ಪೆಕ್ಟರ್,​ ಮಾರ್ಷಲ್ ಹಾಗೂ ಪೊಲೀಸರು ಎಲ್ಲರೂ ಕೊವಿಡ್ ನಿಯಮ ಪಾಲಿಸುವಂತೆ ಕೆಲಸ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.

ಹೊಸ ವರ್ಷಾಚರಣೆಗೆ ರಾತ್ರಿ ಹತ್ತು ಗಂಟೆಗಿಂತಲೂ ಹೆಚ್ಚಿನ ಸಮಯ ನೀಡಲು ಆಗುವುದಿಲ್ಲ. ಹಾಸ್ಟೆಲ್, ಅಪಾರ್ಟ್​ಮೆಂಟ್ ಹಾಗೂ ಸ್ಥಳೀಯವಾಗಿ ಹೊಸ ವರ್ಷಾಚರಣೆ ಮಾಡುವಾಗಲೂ ನಿಯಮ ಪಾಲನೆ ಕಡ್ಡಾಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವರ್ಷಾಚರಣೆಗೆ ಬ್ರೇಕ್ ಹಾಕಲು ‘ಖಾಕಿ’ ತಯಾರಿ: ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ, ಎಂಜಿ ರೋಡ್ ಹಾಗೂ ಬ್ರಿಗೇಡ್ ರಸ್ತೆಗಳು ಬಂದ್ ಇದನ್ನೂ ಓದಿ: ಮುಂಬೈನಲ್ಲಿ ಹೊಸ ವರ್ಷಾಚರಣೆಗೆ ಫುಲ್​ ಬ್ರೇಕ್​; ನಗರಾದ್ಯಂತ ಇಂದಿನಿಂದಲೇ ಸೆಕ್ಷನ್​ 144 ಜಾರಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?