AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಂಪೌಂಡ್​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು
ರಾಜಕಾಲುವೆ
ವಿವೇಕ ಬಿರಾದಾರ
|

Updated on:Apr 01, 2023 | 2:33 PM

Share

ಬೆಂಗಳೂರು: ರಾಜಕಾಲುವೆ (Rajakaluve) ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಾಂಪೌಂಡ್​​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ (Bliders) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ. ಬೆಂಗಳೂರು ಪೂರ್ವ ತಾಲೂಕು ಕುಂಬೇನ ಅಗ್ರಹಾರ ಮೂಲಕ ಹಾದು ಹೋಗಿದ್ದ ರಾಜಕಾಲುವೆ ಹಾಗೂ 15 ಮೀಟರ್ ಬಪರ್ ಜೋನ್​ನಲ್ಲಿ ಖಾಸಗಿ ಬಿಲ್ಡರ್ಗಳು ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಥಳಿಯ ಅಧಿಕಾರಿಗಳಿಗೆ ಎಷ್ಟೇ ದೂರು ನೀಡಿದರೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮೀನಾಮೇಷ ಮಾಡುತ್ತಿದ್ದರು.

ಹೀಗಾಗಿ ಸ್ಥಳಿಯರೆಲ್ಲ ಸೇರಿ ರಾಜಕಾಲುವೆ ಹಾಗೂ ಬಪರ್ ಜೋನ್ ಉಳಿಸುವ ನಿಟ್ಟಿನಲ್ಲಿ ಚೆನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮೊರೆ ಹೋಗಿದ್ದರು. ಕಳೆದ ಎರಡು ವರ್ಷಗಳಿಂದ ನಿರಂತರ ಹೋರಾಟ ನಡೆಸಿದರು. ಎರಡು ಪರ ವಾದ-ವಿವಾದ ಆಲಿಸಿದ ನ್ಯಾಯಾಲಯ ಇದೀಗ ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿ, ಒತ್ತುವರಿದಾರರಿಗೆ 85 ಲಕ್ಷ ದಂಡ ಹಾಕಿದೆ.

ಇನ್ನು ನ್ಯಾಯಾಲಯ ದಂಡ ಹಾಕ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಒತ್ತುವರಿಯಾಗಿದ್ದ ಕಾಲುವೆ ತೆರವುಗೊಳಿಸಿದ್ದು ರಾಜಕಾಲುವೆಯ ಬಪರ್ ಜೋನ್​ನಲ್ಲಿ ಗ್ರೀನ್ ಲ್ಯಾಂಡ್ ಮಾಡಲು ಮುಂದಾಗಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 1 April 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?