AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ: ಐಸಿಸ್​ಗೆ ಯುವಕರನ್ನು ಸೆಳೆಯುತ್ತಿದ್ದ ಆರೋಪ

ಯುವಕರನ್ನು ಐಸಿಸ್​ನತ್ತ ಆಕರ್ಷಿಸುವುದರೊಂದಿಗೆ ಹಣಕಾಸು ಸಂಗ್ರಹಿಸಿಕೊಡಲೂ ಈತ ಪ್ರಯತ್ನಿಸುತ್ತಿದ್ದ ಎಂದು ಎನ್​ಐಎ ಹೇಳಿದೆ.

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ: ಐಸಿಸ್​ಗೆ ಯುವಕರನ್ನು ಸೆಳೆಯುತ್ತಿದ್ದ ಆರೋಪ
ಎನ್​ಐಎ
TV9 Web
| Edited By: |

Updated on: Nov 17, 2021 | 10:44 PM

Share

ಬೆಂಗಳೂರು: ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರಗಾಮಿ ಸಂಘಟನೆಯ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (National Investigation Agency – NIA) ಸಂಸ್ಥೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಶಂಕಿತನನ್ನು ಜುಹೇಬ್ ಶಕೀಲ್ ಎಂದು ಗುರುತಿಸಲಾಗಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಶಕೀಲ್, ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ಐಸಿಸ್, ಐಎಸ್ಐಎಲ್ ಜೊತೆಗೆ ಸಂಪರ್ಕ ಹೊಂದಿದ್ದ. ಕಳೆದ ಒಂದು ವರ್ಷದಿಂದ ಇವನನ್ನು ಎನ್​ಐಎ ಹುಡುಕುತ್ತಿತ್ತು. ಮುಸ್ಲಿಂ ಯುವಕರನ್ನ ಸೆಳೆದು ಐಸಿಸ್ ಸಂಘಟನೆಗೆ ಸೇರಿಸುತ್ತಿದ್ದ ಎಂದು ಎನ್​ಐಎ ಅನುಮಾನಿಸಿದೆ.

ಮುಸ್ಲಿಂ ಯುವಕರನ್ನು ಐಸಿಸ್​ನತ್ತ ಆಕರ್ಷಿಸುವುದರೊಂದಿಗೆ ಹಣಕಾಸು ಸಂಗ್ರಹಿಸಿಕೊಡಲೂ ಪ್ರಯತ್ನಿಸುತ್ತಿದ್ದ. ತಿಲಕ್ ನಗರ ಮೂಲದ 32ರ ಹರೆಯದ ಶಕೀಲ್ ಕಂಪ್ಯೂಟರ್ ಅಪ್ಲಿಕೇಶನ್​ ಪರಿಣಿತನೂ ಹೌದು. ಸೆಪ್ಟೆಂಬರ್ 2020ರಲ್ಲಿ ಮೊಹಮದ್ ತೌಖಿರ್ ಮೊಹ್ಮೂದ್, ಇರ್ಫಾನ್ ನಾಸೀರ್, ಶಿಹಾಬ್ ಮತ್ತು ಝುಹಾಬ್ ಹಮೀದ್ ವಿರುದ್ಧ ಎನ್​ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ಐಸಿಸ್ ಚಟುವಟಿಕೆಗಳಿಗೆ ಹಣ ಸಂಗ್ರಹಣೆಗಾಗಿ ಝುಹಾಬ್ ಮತ್ತು ತೌಖಿರ್​ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಸಂಗತಿ ವಿಚಾರಣೆ ವೇಳೆ ಪತ್ತೆಯಾಗಿತ್ತು. ಕುರಾನ್ ಅಧ್ಯಯನ ಗುಂಪುಗಳ ಮೂಲಕ ಯುವಕರಲ್ಲಿ ಮೂಲಭೂತವಾದದ ವಿಚಾರಗಳನ್ನು ಬಿತ್ತಿ ಐಸಿಸ್ ವಿಚಾರಧಾರೆ ಬಿತ್ತುತ್ತಿದ್ದರು. ಟರ್ಕಿ ಮೂಲಕ ಸಿರಿಯಾಗೆ ಕಳಿಸಿ ಐಸಿಸ್​ ಸಂಘಟನೆಯ ತೊಡಗಿಸುತ್ತಿದ್ದರು ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

2013-14ರ ಅವಧಿಯಲ್ಲಿ ಬೆಂಗಳೂರಿನಿಂದ ಹಲವು ಯುವಕರನ್ನು ಸಿರಿಯಾಗೆ ಕಳಿಸಿ ಐಸಿಸ್ ಚಟುವಟಿಕೆಗಳಲ್ಲಿ ತೊಡಗಿಸಿದ ಆರೋಪದ ಮೇಲೆ ತೌಖಿರ್​ನನ್ನು ಅಕ್ಟೋಬರ್ 23ರಂದು ಬಂಧಿಸಲಾಗಿತ್ತು. ಈತ ಸೌದಿ ಅರೇಬಿಯಾದಲ್ಲಿ ದಂತವೈದ್ಯನಾಗಿದ್ದ. ಸೌದಿಯಿಂದ ಬಂದಿದ್ದ ತೌಖಿರ್​ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ ಇದನ್ನೂ ಓದಿ: ಆರೇ ತಿಂಗಳಲ್ಲಿ ಐಸಿಸ್ ಸಂಘಟನೆ ಅಮೆರಿಕ ಮೇಲೆ‌ ದಾಳಿ ಮಾಡುವ ಸಾಮರ್ಥ್ಯ ಹೊಂದಲಿದೆ: ಅಮೆರಿಕ ಗುಪ್ತಚರರಿಂದ ಎಚ್ಚರಿಕೆ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ