AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ: ಐಸಿಸ್​ಗೆ ಯುವಕರನ್ನು ಸೆಳೆಯುತ್ತಿದ್ದ ಆರೋಪ

ಯುವಕರನ್ನು ಐಸಿಸ್​ನತ್ತ ಆಕರ್ಷಿಸುವುದರೊಂದಿಗೆ ಹಣಕಾಸು ಸಂಗ್ರಹಿಸಿಕೊಡಲೂ ಈತ ಪ್ರಯತ್ನಿಸುತ್ತಿದ್ದ ಎಂದು ಎನ್​ಐಎ ಹೇಳಿದೆ.

ಬೆಂಗಳೂರಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ: ಐಸಿಸ್​ಗೆ ಯುವಕರನ್ನು ಸೆಳೆಯುತ್ತಿದ್ದ ಆರೋಪ
ಎನ್​ಐಎ
TV9 Web
| Edited By: |

Updated on: Nov 17, 2021 | 10:44 PM

Share

ಬೆಂಗಳೂರು: ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರಗಾಮಿ ಸಂಘಟನೆಯ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (National Investigation Agency – NIA) ಸಂಸ್ಥೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಶಂಕಿತನನ್ನು ಜುಹೇಬ್ ಶಕೀಲ್ ಎಂದು ಗುರುತಿಸಲಾಗಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಶಕೀಲ್, ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ಐಸಿಸ್, ಐಎಸ್ಐಎಲ್ ಜೊತೆಗೆ ಸಂಪರ್ಕ ಹೊಂದಿದ್ದ. ಕಳೆದ ಒಂದು ವರ್ಷದಿಂದ ಇವನನ್ನು ಎನ್​ಐಎ ಹುಡುಕುತ್ತಿತ್ತು. ಮುಸ್ಲಿಂ ಯುವಕರನ್ನ ಸೆಳೆದು ಐಸಿಸ್ ಸಂಘಟನೆಗೆ ಸೇರಿಸುತ್ತಿದ್ದ ಎಂದು ಎನ್​ಐಎ ಅನುಮಾನಿಸಿದೆ.

ಮುಸ್ಲಿಂ ಯುವಕರನ್ನು ಐಸಿಸ್​ನತ್ತ ಆಕರ್ಷಿಸುವುದರೊಂದಿಗೆ ಹಣಕಾಸು ಸಂಗ್ರಹಿಸಿಕೊಡಲೂ ಪ್ರಯತ್ನಿಸುತ್ತಿದ್ದ. ತಿಲಕ್ ನಗರ ಮೂಲದ 32ರ ಹರೆಯದ ಶಕೀಲ್ ಕಂಪ್ಯೂಟರ್ ಅಪ್ಲಿಕೇಶನ್​ ಪರಿಣಿತನೂ ಹೌದು. ಸೆಪ್ಟೆಂಬರ್ 2020ರಲ್ಲಿ ಮೊಹಮದ್ ತೌಖಿರ್ ಮೊಹ್ಮೂದ್, ಇರ್ಫಾನ್ ನಾಸೀರ್, ಶಿಹಾಬ್ ಮತ್ತು ಝುಹಾಬ್ ಹಮೀದ್ ವಿರುದ್ಧ ಎನ್​ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ಐಸಿಸ್ ಚಟುವಟಿಕೆಗಳಿಗೆ ಹಣ ಸಂಗ್ರಹಣೆಗಾಗಿ ಝುಹಾಬ್ ಮತ್ತು ತೌಖಿರ್​ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಸಂಗತಿ ವಿಚಾರಣೆ ವೇಳೆ ಪತ್ತೆಯಾಗಿತ್ತು. ಕುರಾನ್ ಅಧ್ಯಯನ ಗುಂಪುಗಳ ಮೂಲಕ ಯುವಕರಲ್ಲಿ ಮೂಲಭೂತವಾದದ ವಿಚಾರಗಳನ್ನು ಬಿತ್ತಿ ಐಸಿಸ್ ವಿಚಾರಧಾರೆ ಬಿತ್ತುತ್ತಿದ್ದರು. ಟರ್ಕಿ ಮೂಲಕ ಸಿರಿಯಾಗೆ ಕಳಿಸಿ ಐಸಿಸ್​ ಸಂಘಟನೆಯ ತೊಡಗಿಸುತ್ತಿದ್ದರು ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

2013-14ರ ಅವಧಿಯಲ್ಲಿ ಬೆಂಗಳೂರಿನಿಂದ ಹಲವು ಯುವಕರನ್ನು ಸಿರಿಯಾಗೆ ಕಳಿಸಿ ಐಸಿಸ್ ಚಟುವಟಿಕೆಗಳಲ್ಲಿ ತೊಡಗಿಸಿದ ಆರೋಪದ ಮೇಲೆ ತೌಖಿರ್​ನನ್ನು ಅಕ್ಟೋಬರ್ 23ರಂದು ಬಂಧಿಸಲಾಗಿತ್ತು. ಈತ ಸೌದಿ ಅರೇಬಿಯಾದಲ್ಲಿ ದಂತವೈದ್ಯನಾಗಿದ್ದ. ಸೌದಿಯಿಂದ ಬಂದಿದ್ದ ತೌಖಿರ್​ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ಸಂಬಂಧ ಹೊಂದಿದ್ದ ಆರೋಪ: ಶಂಕಿತನ ಬಂಧಿಸಿದ ಎನ್​ಐಎ ಇದನ್ನೂ ಓದಿ: ಆರೇ ತಿಂಗಳಲ್ಲಿ ಐಸಿಸ್ ಸಂಘಟನೆ ಅಮೆರಿಕ ಮೇಲೆ‌ ದಾಳಿ ಮಾಡುವ ಸಾಮರ್ಥ್ಯ ಹೊಂದಲಿದೆ: ಅಮೆರಿಕ ಗುಪ್ತಚರರಿಂದ ಎಚ್ಚರಿಕೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ