AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ ಅಧಿಕಾರಿಗಳು

ಬೆಂಗಳೂರಿನಲ್ಲಿ ನಡೆದಿದ್ದ ಎನ್ಐಎ (NIA) ದಾಳಿ ಪ್ರಕರಣ ಸಂಬಂಧ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬೆಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧಿಸಿದ ಎನ್​ಐಎ ಅಧಿಕಾರಿಗಳು
ಎನ್​ಐಎ
Jagadisha B
| Edited By: |

Updated on:Dec 14, 2023 | 8:56 AM

Share

ಬೆಂಗಳೂರು, ಡಿ.14: ಬೆಂಗಳೂರಿನಲ್ಲಿ ನಡೆದಿದ್ದ ಎನ್ಐಎ (NIA) ದಾಳಿ ಪ್ರಕರಣ ಸಂಬಂಧ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬೆಂಗಳೂರಿನಲ್ಲಿ ಎನ್​ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಅಲಿ ಅಬ್ಬಾಸ್ ಮನೆ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ದಿನ‌ ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಲಾಗಿತ್ತು. ಇದಾದ ಬಳಿಕ ದಾಖಲೆಗಳ‌ ಪರಿಶೀಲನೆ ನಡೆಸಿ ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದರು. ಸದ್ಯ ಈಗ ಅಬ್ಬಾಸ್ ಅಲಿಯನ್ನ ಬಂಧಿಸಿ ತೀವ್ರ ವಿಚಾರಣೆ ನಡೆಸ್ತಿದ್ದಾರೆ.

ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ಬಂಧಿಸಿ, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು. ಅದರಲ್ಲಿ ಐಎಸ್‌ (ಇಸ್ಲಾಮಿಕ್ ಸ್ಟೇಟ್) ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಅಲಿ ಹಫೀಜ್ ಅಲಿಯಾಸ್ ಅಲಿ ಅಬ್ಬಾಸ್‌ ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ವಾಸವಾಗಿದ್ದ ಅಲಿ ಅಬ್ಬಾಸ್ ಪೇಟಿವಾಲ ಎಂಬಾತನ ಮನೆಯ ಮೇಲೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿ ತೀವ್ರ ಶೋಧ ನಡೆಸಿದ್ದರು. ಬಳಿಕ ಮರುದಿನ ಮತ್ತೆ ಅಬ್ಬಾಸ್ ಮನೆಯ ಮೇಲೆ ದಾಳಿ ಮಾಡಿ ಪರಿಶೀಲಿಸಿ 16,42,000 ಹಣ ಸೀಜ್ ಮಾಡಿದ್ದರು. ಮೊಬೈಲ್​, ಲ್ಯಾಪ್​ಟಾಪ್​​​ ಪರಿಶೀಲನೆ ನಡೆಸಿ ಐಸಿಸ್​​ ಶಂಕಿತ ಉಗ್ರ ಅಬ್ಬಾಸ್​ನನ್ನ ವಶಕ್ಕೆ ಪಡೆದಿದ್ದರು. ಬಳಿಕ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದರು. ನಂತರ ದಾಖಲೆಗಳ ಪರಿಶೀಲನೆ ನಡೆಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ಅರೆಸ್ಟ್ ಮಾಡಲಾಗಿದೆ.

ಅಬ್ಬಾಸ್ ಅಲಿ ಯಾರು?

ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು‌, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಹೆಂಡ್ತಿ ಡಯಾಟಿಕ್ ಹಾಸ್ಪಿಟಲ್ ನಡೆಸ್ತಿದ್ದಾರೆ. ಇವರು ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದರು. ಹೆಂಡ್ತಿ, ಮೂವರು ಮಕ್ಕಳು ಹಾಗು ತಂದೆ ಜೊತೆ ಅಬ್ಬಾಸ್ ವಾಸವಾಗಿದ್ದ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:43 am, Thu, 14 December 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ