ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

ಕಳೆದ ಆಗಸ್ಟ್.31 ರಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಆನೇಕಲ್(Anekal) ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 26, 2024 | 3:22 PM

ಬೆಂಗಳೂರು ಗ್ರಾಮಾಂತರ, ಸೆ.26: ಆನೇಕಲ್(Anekal) ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.

ಇದನ್ನೂ ಓದಿ:ಬಳ್ಳಾರಿ ಜೈಲಲ್ಲೇ ಕುಳಿತು ಬೆಂಗಳೂರು ಸ್ಫೋಟಕ್ಕೆ ಸಂಚು ಹೂಡಿದ್ದ ಶಂಕಿತ ಉಗ್ರ ಎನ್​ಐಎ ವಶಕ್ಕೆ

ಕೆಂಪೇಗೌಡ ಏರ್ಪೋರ್ಟ್​ನಲ್ಲಿ ​ಓರ್ವ ಉಗ್ರ ಅರೆಸ್ಟ್​

ಕಳೆದ ಆಗಸ್ಟ್​.31 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇತ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದರು. ಇದೀಗ ಮತ್ತೋರ್ವ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Thu, 26 September 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!