AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

ಕಳೆದ ಆಗಸ್ಟ್.31 ರಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಆನೇಕಲ್(Anekal) ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು
ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ
ರಾಮು, ಆನೇಕಲ್​
| Edited By: |

Updated on:Sep 26, 2024 | 3:22 PM

Share

ಬೆಂಗಳೂರು ಗ್ರಾಮಾಂತರ, ಸೆ.26: ಆನೇಕಲ್(Anekal) ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.

ಇದನ್ನೂ ಓದಿ:ಬಳ್ಳಾರಿ ಜೈಲಲ್ಲೇ ಕುಳಿತು ಬೆಂಗಳೂರು ಸ್ಫೋಟಕ್ಕೆ ಸಂಚು ಹೂಡಿದ್ದ ಶಂಕಿತ ಉಗ್ರ ಎನ್​ಐಎ ವಶಕ್ಕೆ

ಕೆಂಪೇಗೌಡ ಏರ್ಪೋರ್ಟ್​ನಲ್ಲಿ ​ಓರ್ವ ಉಗ್ರ ಅರೆಸ್ಟ್​

ಕಳೆದ ಆಗಸ್ಟ್​.31 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇತ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪಾರಾರಿಯಾಗುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದರು. ಇದೀಗ ಮತ್ತೋರ್ವ ಶಂಕಿತ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Thu, 26 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ