AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ರಾಜ್ಯದ 19 ಸ್ಥಳಗಳಲ್ಲಿ ಎನ್​ಐಎ ದಾಳಿ: ಮುಖ್ಯಸ್ಥ ಸೇರಿದಂತೆ 8 ಜನರ ಬಂಧನ

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಎನ್​​ಐಎ ದಾಳಿಯಲ್ಲಿ ಐಸಿಸ್ ಬಳ್ಳಾರಿ ಮಾಡ್ಯೂಲ್​ನ ಸ್ಪೋಟದ ಸಂಚು ರೂಪಿಸಿದ್ದ ಯೋಜನೆಯ ಮುಖ್ಯಸ್ಥ ಸೇರಿದಂತೆ 8 ಜನರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಾಳಿ ವೇಳೆ ಬಂಧಿಸಲ್ಪಟ್ಟ 8 ಜನರು ಐಸಿಸ್ ಎಜೆಂಟ್​ಗಳಾಗಿದ್ದು, ನಿಷೇಧಿತ ಸಂಘಟನೆಯಲ್ಲಿ ಸಕ್ರಿಯವಾಗಿದ್ದರು.

4 ರಾಜ್ಯದ 19 ಸ್ಥಳಗಳಲ್ಲಿ ಎನ್​ಐಎ ದಾಳಿ: ಮುಖ್ಯಸ್ಥ ಸೇರಿದಂತೆ 8 ಜನರ ಬಂಧನ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Dec 18, 2023 | 8:11 PM

Share

ಬೆಂಗಳೂರು, ಡಿಸೆಂಬರ್​​ 18: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಎನ್​​ಐಎ (NIA Raid) ದಾಳಿಯಲ್ಲಿ ಐಸಿಸ್ ಬಳ್ಳಾರಿ ಮಾಡ್ಯೂಲ್​ನ ಸ್ಪೋಟದ ಸಂಚು ರೂಪಿಸಿದ್ದ ಯೋಜನೆಯ ಮುಖ್ಯಸ್ಥ ಸೇರಿದಂತೆ 8 ಜನರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಳ್ಳಾರಿಯಲ್ಲಿ ಮಿನಾಜ್ ಅಲಿಯಾಸ್ ಎಂಡಿ ಸುಲೈಮಾನ್, ಸೈಯದ್ ಸಮೀರ್​​, ಮುಂಬೈನಲ್ಲಿ ಅನಾಸ್ ಇಕ್ಬಾಲ್ ಶೇಖ್, ಬೆಂಗಳೂರಿನಲ್ಲಿ ಮೊಹಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ ಅಲಿಯಾಸ್ ಸಮಿ, ಎಂಡಿ ಮುಝಮ್ಮಿಲ್​​ ಮತ್ತು ದೆಹಲಿಯಲ್ಲಿ ಶಯಾನ್ ರಹಮಾನ್ ಅಲಿಯಾಸ್ ಹುಸೇನ್, ಎಂಡಿ ಶಹಬಾಜ್ ಅಲಿಯಾಸ್ ಜುಲ್ಫಿಕರ್ ಅಲಿಯಾಸ್ ಗುಡ್ಡು ಬಂಧಿತರು.

ದಾಳಿ ವೇಳೆ ಬಂಧಿಸಲ್ಪಟ್ಟ 8 ಜನರು ಐಸಿಸ್ ಎಜೆಂಟ್​ಗಳಾಗಿದ್ದು, ನಿಷೇಧಿತ ಸಂಘಟನೆಯಲ್ಲಿ ಸಕ್ರಿಯವಾಗಿದ್ದರು. ಭಯೋತ್ಪಾದನಾ ಕೃತ್ಯ ಉತ್ತೇಜಿಸುವ ಚಟುವಟಿಕೆಯಲ್ಲಿ ತೊಡಗಿದ್ದರು. ಮಿನಾಜ್ ಅಲಿಯಾಸ್ ಎಂಡಿ ಸುಲೈಮಾನ್ ಅಣತೆಯಂತೆ ಬಾಕಿ ಜನರು ಕಾರ್ಯ ನಿರ್ವಹಿಸುತಿದ್ದರು.

ಇದನ್ನೂ ಓದಿ: Bengaluru NIA Raid: ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧನ ಪ್ರಕರಣ; ಮತ್ತೆ ಬೆಂಗಳೂರಿನಲ್ಲಿ ಎನ್​ಐಎ ದಾಳಿ

ದಾಳಿ ವೇಳೆ ಬಂಧಿತರ ಬಳಿ ಸ್ಪೋಟಕ ಕಚ್ಚಾ ವಸ್ತುಗಳು ಸೇರಿದಂತೆ ಸಲ್ಫರ್, ಪೊಟ್ಯಾಸಿಯಂ, ನೈಟ್ರೇಟ್, ಇದ್ದಿಲು, ಗನ್ ಪೌಡರ್, ಸಕ್ಕರೆ ಮತ್ತು ಎಥೆನಾಲ್ ಪತ್ತೆ ಆಗಿದ್ದವು. ಜೊತೆಗೆ ಹರಿತವಾದ ಆಯುಧಗಳು, ಲೆಕ್ಕವಿಲ್ಲದಷ್ಟು ನಗದು ಸಹ ಪತ್ತೆ ಮಾಡಲಾಗಿದೆ.

ಇದನ್ನೂ ಓದಿ: ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಇದೇ ವೇಳೆ ಸ್ಮಾರ್ಟ್ ಫೋನ್​ಗಳು ಮತ್ತು ಕೆಲ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ. ಕಚ್ಚಾ ವಸ್ತುಗಳ ಬಳಸಿ ಐಇಡಿ ತಯಾರಿಸಿ ಸ್ಪೋಟಕ್ಕೆ ಸಂಚು ರೂಪಿಸಿದ್ದಾಗಿ ತನಿಖೆ ವೇಳೆ ರಹಸ್ಯ ಬಯಲಾಗಿದೆ. ಈ ಮೂಲಕ ಭಯೋತ್ಪಾದಕ ಕೃತ್ಯ ನಡೆಸಲು ಮುಂದಾಗಿದ್ದರು. ಆರೋಪಿಗಳು ಹಿಂಸಾತ್ಮಕ ಜಿಹಾದ್, ಖಿಲಾಫತ್, ಐಸಿಸ್ ಮಾರ್ಗಗಳ ಅನುಸರಿಸುತಿದ್ದರು. ಜೊತೆಗೆ ಎನ್ ಕ್ರಿಪ್ಟ್ ಅಪ್ಲಿಕೇಶನ್ ಮೂಲಕ ಪರಸ್ಪರ ಸಂಪರ್ಕ ಹೊಂದಿದ್ದರೆಂಬುದು ತನಿಖೆ ವೇಳೆ ಬಹಿರಂಗವಾಗಿದೆ.

ಸಂಘಟನೆಗಾಗಿ ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದು ಪತ್ತೆ ಆಗಿದೆ. ಜಿಹಾದ್ ಉದ್ದೇಶಕ್ಕಾಗಿ ಮುಜಾಹಿದ್​ಗಳ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳು ಸಹ ಹೊಂದಿರುವುದು ಕೂಡ ಪತ್ತೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ