Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓರ್ವ ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಬುಧವಾರ ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ.

ಓರ್ವ ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ
ಎನ್​ಐಎ
Follow us
ವಿವೇಕ ಬಿರಾದಾರ
|

Updated on:Dec 13, 2023 | 11:07 AM

ಬೆಂಗಳೂರು, ಡಿಸೆಂಬರ್​ 13: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು (Suspected Terrorists) ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು (ಡಿ.13) ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಡಿಸೆಂಬರ್​ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶಂಕಿತ ಉಗ್ರ ಅಲಿ ಅಬ್ಬಾಸ್​​ನನ್ನು ಬಂಧಿಸಿದ್ದರು.

ಅಲಿ ಅಬ್ಬಾಸ್ ಮೂಲತಃ ಮುಂಬೈ ನಿವಾಸಿಯಾಗಿದ್ದು, ನಾಲ್ಕು ವರ್ಷದ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದನು. ದಂಪತಿ ಹಾಗೂ ಮೂವರು ಮಕ್ಕಳು ಸಮೇತ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದನು. ಅಲಿ ಅಬ್ಬಾಸ್​ ಡಾಟಾ ಕನ್ಸಲ್‌ಟೆಂಟ್‌ ಆಗಿ ಒಂದು ವರ್ಷದಿಂದ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಕೊರೊನಾ ಸಂದರ್ಭದಲ್ಲಿ ಅಲಿ ಅಬ್ಬಾಸ್ ಕೆಲಸ ಬಿಟ್ಟಿದ್ದನು. ಪತ್ನಿ ನ್ಯೂಟ್ರಿ ಕೇರ್ ಆಸ್ಪತ್ರೆ ನಡೆಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಶಂಕಿತ ಉಗ್ರ ಅಲಿ ಅಬ್ಬಾಸ್​ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ಡಿಸೆಂಬರ್​​ 9ರ ನಸುಕಿನ ಜಾವ 5:30 ಸುಮಾರಿಗೆ ಶಂಕಿತ ಉಗ್ರನ ಮನೆ ಮೇಲೆ ದಾಳಿದ್ದರು. ಶಂಕಿತ ಉಗ್ರ ಅಲಿ ಅಬ್ಬಾಸ್​ ನಗರದಲ್ಲಿ ಉರ್ದು ಶಾಲೆ ನಡೆಸುತ್ತಿದ್ದನು. ಶಂಕಿತ ಉಗ್ರನಿಂದ ಅಧಿಕಾರಿಗಳು 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದರು.

ಮಹಾರಾಷ್ಟ್ರದಲ್ಲೂ ದಾಳಿ

ಎನ್​ಐಎ ಕಳೆದ ಶನಿವಾರ ಬೆಳ್ಳಂ ಬೆಳಿಗ್ಗೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಎನ್​ಐಎ ಅಧಿಕಾರಿಗಳು ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿ, 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದರು. ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಾಂಡ್ಲರ್‌ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Wed, 13 December 23

ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ