AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓರ್ವ ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದಾದ ಬೆನ್ನಲ್ಲೇ ಬುಧವಾರ ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ.

ಓರ್ವ ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನ 12ಕ್ಕೂ ಹೆಚ್ಚು ಸ್ಥಳಗಳಲ್ಲಿ NIA ದಾಳಿ
ಎನ್​ಐಎ
ವಿವೇಕ ಬಿರಾದಾರ
|

Updated on:Dec 13, 2023 | 11:07 AM

Share

ಬೆಂಗಳೂರು, ಡಿಸೆಂಬರ್​ 13: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇತ್ತೀಚಿಗೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು (Suspected Terrorists) ಬಂಧಿಸಿದ್ದರು. ಇದಾದ ಬೆನ್ನಲ್ಲೇ ಇಂದು (ಡಿ.13) ಎನ್​ಐಎ ಅಧಿಕಾರಿಗಳು ನಗರದ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಎನ್​ಐಎ ಅಧಿಕಾರಿಗಳು ಡಿಸೆಂಬರ್​ 9 ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶಂಕಿತ ಉಗ್ರ ಅಲಿ ಅಬ್ಬಾಸ್​​ನನ್ನು ಬಂಧಿಸಿದ್ದರು.

ಅಲಿ ಅಬ್ಬಾಸ್ ಮೂಲತಃ ಮುಂಬೈ ನಿವಾಸಿಯಾಗಿದ್ದು, ನಾಲ್ಕು ವರ್ಷದ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದನು. ದಂಪತಿ ಹಾಗೂ ಮೂವರು ಮಕ್ಕಳು ಸಮೇತ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದನು. ಅಲಿ ಅಬ್ಬಾಸ್​ ಡಾಟಾ ಕನ್ಸಲ್‌ಟೆಂಟ್‌ ಆಗಿ ಒಂದು ವರ್ಷದಿಂದ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಕೊರೊನಾ ಸಂದರ್ಭದಲ್ಲಿ ಅಲಿ ಅಬ್ಬಾಸ್ ಕೆಲಸ ಬಿಟ್ಟಿದ್ದನು. ಪತ್ನಿ ನ್ಯೂಟ್ರಿ ಕೇರ್ ಆಸ್ಪತ್ರೆ ನಡೆಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಶಂಕಿತ ಉಗ್ರ ಅಲಿ ಅಬ್ಬಾಸ್​ ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ಡಿಸೆಂಬರ್​​ 9ರ ನಸುಕಿನ ಜಾವ 5:30 ಸುಮಾರಿಗೆ ಶಂಕಿತ ಉಗ್ರನ ಮನೆ ಮೇಲೆ ದಾಳಿದ್ದರು. ಶಂಕಿತ ಉಗ್ರ ಅಲಿ ಅಬ್ಬಾಸ್​ ನಗರದಲ್ಲಿ ಉರ್ದು ಶಾಲೆ ನಡೆಸುತ್ತಿದ್ದನು. ಶಂಕಿತ ಉಗ್ರನಿಂದ ಅಧಿಕಾರಿಗಳು 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದರು.

ಮಹಾರಾಷ್ಟ್ರದಲ್ಲೂ ದಾಳಿ

ಎನ್​ಐಎ ಕಳೆದ ಶನಿವಾರ ಬೆಳ್ಳಂ ಬೆಳಿಗ್ಗೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಎನ್​ಐಎ ಅಧಿಕಾರಿಗಳು ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಿ, 13 ಜನ ಶಂಕಿತ ಉಗ್ರರನ್ನು ಬಂಧಿಸಿದ್ದರು. ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಾಂಡ್ಲರ್‌ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Wed, 13 December 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ