AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು
ಬಿಎಂಟಿಸಿ
TV9 Web
| Edited By: ವಿವೇಕ ಬಿರಾದಾರ|

Updated on: Sep 06, 2023 | 8:05 AM

Share

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಾಯಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಇನ್ನು ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ (Namma BMTC)’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್​ನಲ್ಲಿ ಪ್ರಯಾಣದ ಟಿಕೆಟ್​ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು: ಡಬಲ್ ಡೆಕ್ಕರ್​ ಬಸ್​​ಗೆ ಶೀಘ್ರ ಟೆಂಡರ್ ಕರೆಯಲಿದೆ ಬಿಎಂಟಿಸಿ, ವರ್ಷಾಂತ್ಯ ರಸ್ತೆಗಿಳಿಯಲಿವೆ ಬಸ್​ಗಳು

“ಈ ಆ್ಯಪ್​ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್​​ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್​ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.”

ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್​ಗಳಲ್ಲಿ ಯುಪಿಐ ಮೂಲಕ ಟಿಕೆಟ್​ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​​ಗಳಲ್ಲೂ ಪರಿಚಯಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್