ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು
ಬಿಎಂಟಿಸಿ
Follow us
| Updated By: ವಿವೇಕ ಬಿರಾದಾರ

Updated on: Sep 06, 2023 | 8:05 AM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಪ್ರಯಾಣಿಸುವ ಪ್ರಾಯಣಿಕರಿಗೆ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಹಣ ಪಡೆಯುತ್ತಿತ್ತು. ಆದರೆ ಶೀಘ್ರದಲ್ಲೇ ಇದನ್ನು ರದ್ದುಪಡಿಸಲಾಗುವುದು ಎಂದು ಸಾರಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಇನ್ನು ಸೆಪ್ಟೆಂಬರ್​ 25ಕ್ಕೆ ಬಿಎಂಟಿಸಿ ಆರಂಭವಾಗಿ 25 ವರ್ಷ ಪೂರೈಸಲಿದೆ. ಈ ರಜತ ಮಹೋತ್ಸವ ದಿನದಂದೇ ‘ನಮ್ಮ ಬಿಎಂಟಿಸಿ (Namma BMTC)’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸೋಮವಾರ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ಪರಿಶೀಲಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು ಈ ಆ್ಯಪ್ ಮೂಲಕ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ. ಮತ್ತು ಈ ಆ್ಯಪ್​ನಲ್ಲಿ ಪ್ರಯಾಣದ ಟಿಕೆಟ್​ ಕೂಡ ಕೊಂಡುಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ: ಬೆಂಗಳೂರು: ಡಬಲ್ ಡೆಕ್ಕರ್​ ಬಸ್​​ಗೆ ಶೀಘ್ರ ಟೆಂಡರ್ ಕರೆಯಲಿದೆ ಬಿಎಂಟಿಸಿ, ವರ್ಷಾಂತ್ಯ ರಸ್ತೆಗಿಳಿಯಲಿವೆ ಬಸ್​ಗಳು

“ಈ ಆ್ಯಪ್​ ಅನ್ನು ಆ್ಯಪ್ ಅನ್ನು 2022 ರ ಡಿಸೆಂಬರ್​​ನಲ್ಲಿ ಮತ್ತು ನಂತರ 2023 ರ ಜನವರಿ ಮತ್ತು ಮಾರ್ಚ್​ನಲ್ಲಿ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಸರಿಪಡಿಸಿ ಅನಾವರಣಗೊಳಿಸಲು ವಿಳಂಬವಾಯಿತು.”

ಇತ್ತೀಚಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಬಸ್​ಗಳಲ್ಲಿ ಯುಪಿಐ ಮೂಲಕ ಟಿಕೆಟ್​ ಕೊಂಡುಕೊಳ್ಳುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಗಿದೆ. ಇದು ಯಶಸ್ವಿಯಾದರೇ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್​​ಗಳಲ್ಲೂ ಪರಿಚಯಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ