Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ; ಸ್ಪಂದಿಸದ ಆಸ್ಪತ್ರೆ ಆಡಳಿತ

Nimhans Bengaluru: ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದಾರೆ.

ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ; ಸ್ಪಂದಿಸದ ಆಸ್ಪತ್ರೆ ಆಡಳಿತ
ನಿಮ್ಹಾನ್ಸ್ ಸಿಬ್ಬಂದಿ ಪ್ರತಿಭಟನೆ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Aug 06, 2021 | 11:28 PM

ಬೆಂಗಳೂರು: ನಗರದ ನಿಮ್ಹಾನ್ಸ್ ಆಸ್ಪತ್ರೆ ಗುತ್ತಿಗೆ ಸಿಬ್ಬಂದಿಯಿಂದ ಕೆಲಸದ ಸಮಯದ ವಿಚಾರವಾಗಿ ಪ್ರತಿಭಟನೆ ನಡೆದಿದೆ. ಮಹಿಳಾ ಸಿಬ್ಬಂದಿ ಸಂಜೆ 7.30ರ ಒಳಗೆ ಶಿಫ್ಟ್ ಮುಗಿಸುವಂತೆ ಮನವಿ ಮಾಡಿದ್ದರು. ಆದರೆ, ಗುತ್ತಿಗೆ ಸಿಬ್ಬಂದಿ ಮನವಿಗೆ ಆಡಳಿತ ಮಂಡಳಿ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೀಗಾಗಿ, ಸಿಬ್ಬಂದಿ ಧರಣಿ ನಡೆಸಿದ್ದಾರೆ. ಈ ವಿಚಾರವಾಗಿ ಕಳೆದ ಒಂದು ತಿಂಗಳಿಂದ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸಂಸ್ಥೆ ಡೋಂಟ್‌ಕೇರ್ ಎಂಬಂತೆ ವರ್ತಿಸುತ್ತಿದೆ ಎಂದು ತಿಳಿದುಬಂದಿದೆ.

ನಿಮ್ಹಾನ್ಸ್ ಆಸ್ಪತ್ರೆಯ ಹೌಸ್ ಕೀಪಿಂಗ್ ಸಿಬ್ಬಂದಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ರೇಡಿಯಾಲಜಿ ವಿಭಾಗದಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸದ ಟೈಮಿಂಗ್ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಭಾಗದ ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವ ಕಾರಣದಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ 7.30 ಒಳಗೆ ಕೆಲಸ ಮುಗಿಸಲು ಅವರು ಬೇಡಿಕೆ ಇಟ್ಟಿದ್ದಾರೆ.

ಕೊರೊನಾ, ನೈಟ್ ಕರ್ಫ್ಯೂ ಕಾರಣದಿಂದ ಬಸ್ ವ್ಯವಸ್ಥೆ, ಸಂಚಾರ ವ್ಯವಸ್ಥೆಗೆ ತೊಂದರೆ ಆಗುತ್ತಿದೆ ಎಂದು ಸಿಬ್ಬಂದಿಗಳು ನಿಮ್ಹಾನ್ಸ್ ಆಸ್ಪತ್ರೆಯ ಒಳಗೆ ಬರುವ ರಸ್ತೆಯಲ್ಲಿ ನಿಂತು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ನಿಮ್ಹಾನ್ಸ್ ಹಾಸ್ಪಿಟಲ್ ಆಡಳಿತ ಮಂಡಳಿ ಮನವಿಗೆ ಒಪ್ಪಿಲ್ಲ. ಇದರಿಂದಾಗಿ ದಿಕ್ಕುತೋಚದ ಪರಿಸ್ಥಿತಿಯಲ್ಲಿ ನಿಮ್ಹಾನ್ಸ್ ರೇಡಿಯಾಲಜಿ ಸಿಬ್ಬಂದಿಗಳು ಇದ್ದಾರೆ. ಅವರಲ್ಲಿ ಬಹುತೇಕರು ಆಸ್ಪತ್ರೆಯಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಸೇವೆ ಮಾಡುತ್ತಿದ್ದವರು ಎಂಬುದು ಮತ್ತೊಂದು ಮಾತು. ಆದರೆ, ಸಿಬ್ಬಂದಿಗಳ ಬೇಡಿಕೆಗೆ ಸ್ಪಂದನೆ ದೊರಕಿಲ್ಲ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,805 ಕೊರೊನಾ ಕೇಸ್ ಪತ್ತೆ; 36 ಮಂದಿ ಸಾವು

Covid19 Guidelines: ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

(Nimhans Hospital Contract Basis Employees Protest on Working Timings)

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ