AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Sep 21, 2024 | 12:39 PM

Share

ಬೆಂಗಳೂರು, ಸೆ.21: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಜನರೇ ಎಚ್ಚರ ಎಚ್ಚರ. ನೀವು ಕೊಂಚ ಯಾಮಾರಿದ್ರೂ ಮತ್ತೆ ಹೋಮ್ ಕ್ವಾರಂಟೈನ್ (Home Quarantine) ಆತಂಕ ಶುರುವಾಗಲಿದೆ. ಕೋವಿಡ್ ಟೈಮ್​ನಲ್ಲಿ ಕ್ವಾರಂಟೈನ್ ಜನರ ಜೀವ ಹಿಂಡಿತ್ತು. ಇದೀಗ ರಾಜ್ಯದಲ್ಲಿ ನಿಫಾ (Nipah Virus) ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದೆ. ತಮ್ಮನ್ನು ತಾವೇ ದಿಗ್ಬಂಧನಕ್ಕೆ ಒಳಗಾಗಬೇಕಾಗುವ ಸಮಯಬರಬಹುದು.

ಬೆಂಗಳೂರಿನಲ್ಲಿ ನಿಫಾ ಹಾಗೂ ಮಂಕಿಪಾಕ್ಸ್ ಆತಂಕ ಮತ್ತೆ ಶುರುವಾಗಿದೆ. ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ

41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್​ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ ಯಾವ ನಿಫಾ ಕೇಸ್ ಕೂಡ ದಾಖಲಾಗಿಲ್ಲ. ಕೇರಳಕ್ಕೆ ಹೋಗಿದ್ದ ಸ್ನೇಹಿತರು ಹಾಗೂ ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಬಳಿಕ ಲಕ್ಷಣ ಕಂಡು ಬರದಿದ್ದರೆ ಆತಂಕ ಕಡಿಮೆ ಆಗಲಿದೆ. ಕ್ವಾರಂಟೈನ್ ನಿಂದ ಸ್ನೇಹಿತರು ಹಾಗೂ ಕಾಲೇಜು ಸಿಬ್ಬಂದಿ ಪರದಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ