AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Sep 21, 2024 | 12:39 PM

Share

ಬೆಂಗಳೂರು, ಸೆ.21: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಜನರೇ ಎಚ್ಚರ ಎಚ್ಚರ. ನೀವು ಕೊಂಚ ಯಾಮಾರಿದ್ರೂ ಮತ್ತೆ ಹೋಮ್ ಕ್ವಾರಂಟೈನ್ (Home Quarantine) ಆತಂಕ ಶುರುವಾಗಲಿದೆ. ಕೋವಿಡ್ ಟೈಮ್​ನಲ್ಲಿ ಕ್ವಾರಂಟೈನ್ ಜನರ ಜೀವ ಹಿಂಡಿತ್ತು. ಇದೀಗ ರಾಜ್ಯದಲ್ಲಿ ನಿಫಾ (Nipah Virus) ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದೆ. ತಮ್ಮನ್ನು ತಾವೇ ದಿಗ್ಬಂಧನಕ್ಕೆ ಒಳಗಾಗಬೇಕಾಗುವ ಸಮಯಬರಬಹುದು.

ಬೆಂಗಳೂರಿನಲ್ಲಿ ನಿಫಾ ಹಾಗೂ ಮಂಕಿಪಾಕ್ಸ್ ಆತಂಕ ಮತ್ತೆ ಶುರುವಾಗಿದೆ. ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ

41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್​ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ ಯಾವ ನಿಫಾ ಕೇಸ್ ಕೂಡ ದಾಖಲಾಗಿಲ್ಲ. ಕೇರಳಕ್ಕೆ ಹೋಗಿದ್ದ ಸ್ನೇಹಿತರು ಹಾಗೂ ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಬಳಿಕ ಲಕ್ಷಣ ಕಂಡು ಬರದಿದ್ದರೆ ಆತಂಕ ಕಡಿಮೆ ಆಗಲಿದೆ. ಕ್ವಾರಂಟೈನ್ ನಿಂದ ಸ್ನೇಹಿತರು ಹಾಗೂ ಕಾಲೇಜು ಸಿಬ್ಬಂದಿ ಪರದಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ