AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Sep 21, 2024 | 12:39 PM

Share

ಬೆಂಗಳೂರು, ಸೆ.21: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಜನರೇ ಎಚ್ಚರ ಎಚ್ಚರ. ನೀವು ಕೊಂಚ ಯಾಮಾರಿದ್ರೂ ಮತ್ತೆ ಹೋಮ್ ಕ್ವಾರಂಟೈನ್ (Home Quarantine) ಆತಂಕ ಶುರುವಾಗಲಿದೆ. ಕೋವಿಡ್ ಟೈಮ್​ನಲ್ಲಿ ಕ್ವಾರಂಟೈನ್ ಜನರ ಜೀವ ಹಿಂಡಿತ್ತು. ಇದೀಗ ರಾಜ್ಯದಲ್ಲಿ ನಿಫಾ (Nipah Virus) ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದೆ. ತಮ್ಮನ್ನು ತಾವೇ ದಿಗ್ಬಂಧನಕ್ಕೆ ಒಳಗಾಗಬೇಕಾಗುವ ಸಮಯಬರಬಹುದು.

ಬೆಂಗಳೂರಿನಲ್ಲಿ ನಿಫಾ ಹಾಗೂ ಮಂಕಿಪಾಕ್ಸ್ ಆತಂಕ ಮತ್ತೆ ಶುರುವಾಗಿದೆ. ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ

41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್​ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ ಯಾವ ನಿಫಾ ಕೇಸ್ ಕೂಡ ದಾಖಲಾಗಿಲ್ಲ. ಕೇರಳಕ್ಕೆ ಹೋಗಿದ್ದ ಸ್ನೇಹಿತರು ಹಾಗೂ ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಬಳಿಕ ಲಕ್ಷಣ ಕಂಡು ಬರದಿದ್ದರೆ ಆತಂಕ ಕಡಿಮೆ ಆಗಲಿದೆ. ಕ್ವಾರಂಟೈನ್ ನಿಂದ ಸ್ನೇಹಿತರು ಹಾಗೂ ಕಾಲೇಜು ಸಿಬ್ಬಂದಿ ಪರದಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್