AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿಫಾ ಆತಂಕ: 41 ಜನರಿಗೆ ಹೋಮ್ ಕ್ವಾರಂಟೈನ್, ಓರ್ವರಲ್ಲಿ ನಿಫಾ ಗುಣಲಕ್ಷಣ ಪತ್ತೆ
ಸಾಂದರ್ಭಿಕ ಚಿತ್ರ
Vinay Kashappanavar
| Updated By: ಆಯೇಷಾ ಬಾನು|

Updated on: Sep 21, 2024 | 12:39 PM

Share

ಬೆಂಗಳೂರು, ಸೆ.21: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಜನರೇ ಎಚ್ಚರ ಎಚ್ಚರ. ನೀವು ಕೊಂಚ ಯಾಮಾರಿದ್ರೂ ಮತ್ತೆ ಹೋಮ್ ಕ್ವಾರಂಟೈನ್ (Home Quarantine) ಆತಂಕ ಶುರುವಾಗಲಿದೆ. ಕೋವಿಡ್ ಟೈಮ್​ನಲ್ಲಿ ಕ್ವಾರಂಟೈನ್ ಜನರ ಜೀವ ಹಿಂಡಿತ್ತು. ಇದೀಗ ರಾಜ್ಯದಲ್ಲಿ ನಿಫಾ (Nipah Virus) ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದೆ. ತಮ್ಮನ್ನು ತಾವೇ ದಿಗ್ಬಂಧನಕ್ಕೆ ಒಳಗಾಗಬೇಕಾಗುವ ಸಮಯಬರಬಹುದು.

ಬೆಂಗಳೂರಿನಲ್ಲಿ ನಿಫಾ ಹಾಗೂ ಮಂಕಿಪಾಕ್ಸ್ ಆತಂಕ ಮತ್ತೆ ಶುರುವಾಗಿದೆ. ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ‌ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರ ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ‌ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ನಿಫಾ ವೈರಸ್ ಭೀತಿ: ಅಂತ್ಯಸಂಸ್ಕಾರಕ್ಕೆ ಕೇರಳಕ್ಕೆ ತೆರಳಿದ್ದ ಸ್ನೇಹಿತರಿಂದ ಸೋಂಕು ಹರಡುವ ಆತಂಕ

41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತ ಮತ್ತು ಸೆರಂ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಸದ್ಯ ಕೋವಿಡ್​ನಲ್ಲಿ ಭಯ ಹುಟ್ಟಿಸಿದ್ದ ಕ್ವಾರಂಟೈನ್ ಈಗ ಮತ್ತೆ ನಿಫಾ ಹೆಸರಲ್ಲಿ ಶುರುವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಬಿ ಅಲರ್ಟ್ ಅಂತಿದ್ದಾರೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

ಸದ್ಯ ರಾಜ್ಯದಲ್ಲಿ ಯಾವ ನಿಫಾ ಕೇಸ್ ಕೂಡ ದಾಖಲಾಗಿಲ್ಲ. ಕೇರಳಕ್ಕೆ ಹೋಗಿದ್ದ ಸ್ನೇಹಿತರು ಹಾಗೂ ಸಿಬ್ಬಂದಿಗಳನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮುಂದಿನ ಎರಡು ದಿನಗಳ ಬಳಿಕ ಲಕ್ಷಣ ಕಂಡು ಬರದಿದ್ದರೆ ಆತಂಕ ಕಡಿಮೆ ಆಗಲಿದೆ. ಕ್ವಾರಂಟೈನ್ ನಿಂದ ಸ್ನೇಹಿತರು ಹಾಗೂ ಕಾಲೇಜು ಸಿಬ್ಬಂದಿ ಪರದಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಧನಯೋಗ
Daily horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಧನಯೋಗ
ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?
ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?
ಒಡಿಶಾದಲ್ಲಿ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿ
ಒಡಿಶಾದಲ್ಲಿ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿ
ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು
ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು
ಅನುದಾನ ಕೇಳಿದ್ರೆ ಜಾತಿ ಯಾವುದು ಅಂದ್ರು: ಸಚಿವರ ವಿರುದ್ಧ ಶಾಸಕ ಆರೋಪ
ಅನುದಾನ ಕೇಳಿದ್ರೆ ಜಾತಿ ಯಾವುದು ಅಂದ್ರು: ಸಚಿವರ ವಿರುದ್ಧ ಶಾಸಕ ಆರೋಪ
ಅಹಮದಾಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊಲೆ; ತೀವ್ರಗೊಂಡ ಪ್ರತಿಭಟನೆ
ಅಹಮದಾಬಾದ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊಲೆ; ತೀವ್ರಗೊಂಡ ಪ್ರತಿಭಟನೆ
ಅನುದಾನದ ಕೊರತೆಯಿಂದ ನಗರದ ರಸ್ತೆ, ಕೆರೆ, ಪಾರ್ಕುಗಳು ಹಾಳಾಗಿವೆ: ವಿಶ್ವನಾಥ್
ಅನುದಾನದ ಕೊರತೆಯಿಂದ ನಗರದ ರಸ್ತೆ, ಕೆರೆ, ಪಾರ್ಕುಗಳು ಹಾಳಾಗಿವೆ: ವಿಶ್ವನಾಥ್
ಉಚ್ಚಾಟನೆಯಿಂದ ರಾಜಣ್ಣಗಾಗಿರುವಷ್ಟು ಅಪಮಾನ ನಂಗಾಗಿಲ್ಲ: ಯತ್ನಾಳ್
ಉಚ್ಚಾಟನೆಯಿಂದ ರಾಜಣ್ಣಗಾಗಿರುವಷ್ಟು ಅಪಮಾನ ನಂಗಾಗಿಲ್ಲ: ಯತ್ನಾಳ್