AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ತನಿಖೆ ವೇಳೆ ಮಹತ್ವದ ಅಂಶ ಬೆಳಕಿಗೆ, ಪತ್ರಗಳನ್ನ ಎಫ್ಎಸ್ಎಲ್​ಗೆ ರವಾನಿಸಿದ ಸಿಸಿಬಿ

ಸಾಹಿತಿಗಳಿಗೆ ಬೆದರಿಕೆ ಪತ್ರಗಳು ಬರುತ್ತಿದ್ದು ಈ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಸಾಹಿತಿಗಳಿಗೆ ಕಳಿಸಲಾದ ಬೆದರಿಕೆ ಪತ್ರಗಳು ಒಂದೇ ಹ್ಯಾಂಡ್ ರೈಟಿಂಗ್​ನಲ್ಲಿ ಬರೆಯಲಾಗಿದೆ. ಸದ್ಯ ಬೆದರಿಕೆ ಪತ್ರಗಳನ್ನ ಎಫ್ಎಸ್ಎಲ್​ಗೆ ರವಾನಿಸಲಾಗಿದೆ.

ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ತನಿಖೆ ವೇಳೆ ಮಹತ್ವದ ಅಂಶ ಬೆಳಕಿಗೆ, ಪತ್ರಗಳನ್ನ ಎಫ್ಎಸ್ಎಲ್​ಗೆ ರವಾನಿಸಿದ ಸಿಸಿಬಿ
ಸಿಎಂ ಭೇಟಿಯಾಗಿದ್ದ ಸಾಹಿತಿಗಳು
Follow us
Jagadisha B
| Updated By: ಆಯೇಷಾ ಬಾನು

Updated on: Sep 24, 2023 | 11:40 AM

ಬೆಂಗಳೂರು, ಸೆ.24: ಕೋಮುವಾದಿ, ಜಾತಿವಾದ ವಿರುದ್ಧದ ನಿಲುವುಳ್ಳ ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳು ಬರುತ್ತಿದ್ದು ಈ ಬಗ್ಗೆ ಸಿಸಿಬಿ ಪೊಲೀಸರು (CCB Police) ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಸಾಹಿತಿಗಳಿಗೆ ಕಳಿಸಲಾದ ಬೆದರಿಕೆ ಪತ್ರಗಳು ಒಂದೇ ಹ್ಯಾಂಡ್ ರೈಟಿಂಗ್​ನಲ್ಲಿ ಬರೆಯಲಾಗಿದೆ. ಸದ್ಯ ಬೆದರಿಕೆ ಪತ್ರಗಳನ್ನ ಎಫ್ಎಸ್ಎಲ್​ಗೆ (FSL) ರವಾನಿಸಲಾಗಿದೆ. ಎಲ್ಲಾ ಬೆದರಿಕೆ ಪತ್ರಗಳು ಒಂದೇ ಕೈ ಬರಹದಲ್ಲಿದ್ದು ಪತ್ರ ಬರೆದವರು ಯಾರು ಅನ್ನೋದು ಇನ್ನೂ ನಿಗೂಢವಾಗಿದೆ.

ಈವರೆಗೂ ಪತ್ರ ಬರೆದವರ ಬಗ್ಗೆ ಚಿಕ್ಕ ಸುಳಿವೂ ಸಹ ಸಿಕ್ಕಿಲ್ಲ. ಅಲ್ಲದೇ ಪತ್ರ ಬೇರೆ ಬೇರೆ ಪೋಸ್ಟ್ ಅಫೀಸ್ ನಿಂದ ಸಾಹಿತಿಗಳಿಗೆ ರವಾನೆ ಆಗಿದೆ. ಈಗಾಗಲೇ ಸಿಸಿಬಿ ಪೊಲೀಸರು ಪೋಸ್ಟ್ ಅಫೀಸ್​ಗಳ ಸೀಲು ಪರಿಶೀಲನೆ ನಡೆಸಿದ್ದಾರೆ. ಪತ್ರಗಳ ಪೋಸ್ಟ್ ಸಂಬಂಧ ಕೆಲವರ ವಿಚಾರಣೆ ನಡೆಸಲಾಗಿದೆ. ಆದರೆ ಪತ್ರ ಬರೆದವರು ಹಾಗೂ ಪೋಸ್ಟ್ ಮಾಡಿದವರ ಬಗ್ಗೆ ಸುಳಿವೇ ಸಿಗುತ್ತಿಲ್ಲ. ಕೆಲವು ಅನುಮಾನಿತ ವ್ಯಕ್ತಿಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು ಬೆದರಿಕೆ ಪತ್ರಗಳನ್ನ ಬರೆದವರು ಯಾರು? ಪೋಸ್ಟ್ ಮಾಡಿದವರು ಯಾರು? ಎಂಬ ಹಂತದಲ್ಲಿ ತನಿಖೆ ಸಾಗುತ್ತಿದೆ.

ಸಾಹಿತಿಗಳಿಗೆ ಬೆದರಿಕೆ ಹಾಕಿದ ಸಂಬಂಧ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪತ್ರದ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿದ್ದರು. ಕುಂ ವೀರಭದ್ರಪ್ಪ, ಬಿ.ಎಲ್ ವೇಣು, ಬಂಜಗೇರೆ ಜೈಪ್ರಕಾಶ್, ಬಿಟಿ ಲಲಿತಾ ನಾಯಕ್ ಸೇರಿದಂತೆ ಐದು ಜನ ಸಾಹಿತಿಗಳಿಂದ ಬಸವೇಶ್ವರನಗರ, ಸಂಜಯನಗರ, ಚಿತ್ರದುರ್ಗ, ಸೇರಿದಂತೆ ಹಲವೆಡೆ ದೂರು ದಾಖಲಾಗಿದೆ. ಪ್ರಕರಣದ ತನಿಖೆಯನ್ನ ಡಿಜಿಪಿ ಸಿಸಿಬಿಗೆ ವರ್ಗಾವಣೆ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕದ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ಪತ್ರ: ಸಿಎಂ ಭೇಟಿ ಬೆನ್ನಲೆ ತನಿಖಾಧಿಕಾರಿ ನೇಮಕಕ್ಕೆ ಸೂಚಿಸಿದ ಪೊಲೀಸ್ ಇಲಾಖೆ

ಬೆದರಿಕೆ ಪತ್ರ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು. ಕೋಮುವಾದಿ ಗುಂಪಿನಿಂದಲೇ ಈ ಪತ್ರಗಳು ಬರುತ್ತಿವೆ. ಜಾತಿವಾದ, ಕೋಮುವಾದ ವಿರುದ್ಧ ಮಾತನಾಡಿದಾಗಲೆಲ್ಲ ‘ನಿಮ್ಮನ್ನು ಮುಗಿಸಿ ಬಿಡ್ತೀವಿ’ ಎಂದು ಒಂದೇ ರೀತಿಯಲ್ಲಿ ಎಲ್ಲರಿಗೂ ಪತ್ರ ಬರುತ್ತಿವೆ. ಗೌರಿ ಲಂಕೇಶ್ , ಕಲ್ಬುರ್ಗಿಯವರ ಹತ್ಯೆ ಮಾಡಿದ ಗುಂಪು ನಮ್ಮನ್ನು ಹತ್ಯೆ ಮಾಡಬಹುದು ಎಂದು ಲೇಖಕ ಕೆ. ಮರುಳಸಿದ್ದಪ್ಪ ಅವರು ಈ ಹಿಂದೆ ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ