AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ ಅವರು ಎಂದು ಆರೋಪಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ ಎಂದ ಸಿಎನ್ ಬಾಲಕೃಷ್ಣ
Rakesh Nayak Manchi
Rakesh Nayak Manchi|

Updated on: Jun 09, 2023 | 3:26 PM

Share

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ (CN Balakrishna) ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ. ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ 21 ಸಹಿಗಳು ಆಗಿವೆ. ಈ ಬಗ್ಗೆ ಮೇ 21 ರಂದು ಅವಿಶ್ವಾಸ ಮಂಡನೆ ಮಾಡಿ ಪತ್ರ ನೀಡಿದ್ದಾರೆ. ಅದಾದ 7 ದಿನಗಳ ಒಳಗೆ ನಾವು ಪತ್ರ ನೀಡಬೇಕಿತ್ತು. ಆ ವೇಳೆ ಪದಾಧಿಕಾರಿ‌ ಒಬ್ಬರು ರಾಜೀನಾಮೆ ನೀಡಿದರು. ನಮ್ಮ ಆಡಳಿತ ಮಂಡಳಿಯಲ್ಲಿ ಅನೇಕ ಗೌರ್ನಿಂಗ್ ಕೌನ್ಸಿಲ್ ಇವೆ. ಇಲ್ಲಿ ಯಾರೂ ಕೂಡ ರಾಜೀನಾಮೆ ಪತ್ರ ಸಲ್ಲಿಸದೆ ಅವಿಶ್ವಾಸ ಮಂಡಿಸಿದ್ದಾರೆ. ಈ ಬಗ್ಗೆ ನೀಡಿರುವ ನೊಟೀಸ್‌ಗಳಿಗೆ ಅವರು ಉತ್ತರ ನೀಡಿಲ್ಲ ಎಂದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ರದ್ದತಿ ಸುಳಿವು; ರಾಜ್ಯದಾದ್ಯಂತ ಮುಂದುವರಿದ ಬಿಜೆಪಿ ಪ್ರತಿಭಟನೆ

ಜೂನ್ 7 ರಂದು ಕೋ ಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್ ಅವರಿಗೆ ಅಧೀಕೃತವಾಗಿ‌ ತಿಳಿಸಿದ್ದೆವು. ಈ‌ ದಿನ ಏಕಾಏಕಿ ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ. ಅವರಿಗೆ ನೀಡಿರುವ ನೊಟೀಸ್‌ಗೆ ಉತ್ತರ ನೀಡಿಲ್ಲ ಅಂತ ಸಹಕಾರಿ ಇಲಾಖೆಗೆ ತಿಳಿಸಿದ್ದೇವೆ ಎಂದು ಹೇಳಿದರು.

ನಾವು ಸಹಕಾರ‌ ಇಲಾಖೆಯು ಸೂಚಿಸುವಂತೆ ಕಾನೂನಾತ್ಮಕವಾಗಿ ನಡೆದುಕೊಳ್ಳುತ್ತೇವೆ. ಅವರು ನಡೆಸಿರುವ ಸಭೆ ಬೈ ಲಾ ವಿರುದ್ಧವಾಗಿದೆ. ಅವಿಶ್ವಾಸ ಮಂಡನೆಗೆ 24 ನಿರ್ದೇಶಕರು ಸಭೆಯಲ್ಲಿ ಭಾಗಿಯಾಗಬೇಕು. ಆದರೇ ಸಭೆಯಲ್ಲಿ 19 ಜನ ಮಾತ್ರ ಇದ್ದರು. ಇದು ಕಾನೂನಾತ್ಮಕವಾಗಿಲ್ಲ ಎಂದು ಬಾಲಕೃಷ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ