AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ ಅವರು ಎಂದು ಆರೋಪಿಸಿದರು.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ: ಸಿಎನ್ ಬಾಲಕೃಷ್ಣ
ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ ಅವಿಶ್ವಾಸ ಮಂಡನೆ ಕಾನೂನಾತ್ಮಕವಾಗಿಲ್ಲ ಎಂದ ಸಿಎನ್ ಬಾಲಕೃಷ್ಣ
Follow us
Rakesh Nayak Manchi
|

Updated on: Jun 09, 2023 | 3:26 PM

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧದ ಅವಿಶ್ವಾಸ ಮಂಡನೆ ಮಾಡಿರುವುದು ಕಾನೂನಾತ್ಮಕವಾಗಿಲ್ಲ ಎಂದು ಸಂಘದ ಅಧ್ಯಕ್ಷ ಸಿಎಂ ಬಾಲಕೃಷ್ಣ (CN Balakrishna) ಆರೋಪಿಸಿದ್ದಾರೆ. ನಮ್ಮ ನೋಟಿಸ್​ಗೆ ಸರಿಯಾದ ಉತ್ತರ ನೀಡಿಲ್ಲ. ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರುದ್ಧ 21 ಸಹಿಗಳು ಆಗಿವೆ. ಈ ಬಗ್ಗೆ ಮೇ 21 ರಂದು ಅವಿಶ್ವಾಸ ಮಂಡನೆ ಮಾಡಿ ಪತ್ರ ನೀಡಿದ್ದಾರೆ. ಅದಾದ 7 ದಿನಗಳ ಒಳಗೆ ನಾವು ಪತ್ರ ನೀಡಬೇಕಿತ್ತು. ಆ ವೇಳೆ ಪದಾಧಿಕಾರಿ‌ ಒಬ್ಬರು ರಾಜೀನಾಮೆ ನೀಡಿದರು. ನಮ್ಮ ಆಡಳಿತ ಮಂಡಳಿಯಲ್ಲಿ ಅನೇಕ ಗೌರ್ನಿಂಗ್ ಕೌನ್ಸಿಲ್ ಇವೆ. ಇಲ್ಲಿ ಯಾರೂ ಕೂಡ ರಾಜೀನಾಮೆ ಪತ್ರ ಸಲ್ಲಿಸದೆ ಅವಿಶ್ವಾಸ ಮಂಡಿಸಿದ್ದಾರೆ. ಈ ಬಗ್ಗೆ ನೀಡಿರುವ ನೊಟೀಸ್‌ಗಳಿಗೆ ಅವರು ಉತ್ತರ ನೀಡಿಲ್ಲ ಎಂದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ರದ್ದತಿ ಸುಳಿವು; ರಾಜ್ಯದಾದ್ಯಂತ ಮುಂದುವರಿದ ಬಿಜೆಪಿ ಪ್ರತಿಭಟನೆ

ಜೂನ್ 7 ರಂದು ಕೋ ಆಪರೇಟಿವ್ ಸೊಸೈಟಿ ರಿಜಿಸ್ಟ್ರಾರ್ ಅವರಿಗೆ ಅಧೀಕೃತವಾಗಿ‌ ತಿಳಿಸಿದ್ದೆವು. ಈ‌ ದಿನ ಏಕಾಏಕಿ ಕೆಂಪೇಗೌಡ ಭವನಕ್ಕೆ ಬಂದು ಸಭೆ ನಡೆಸಲು ಒತ್ತಾಯ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಅವರಿಗೆ ತಿಳುವಳಿಕೆ ಮೂಲಕ ಪತ್ರದ ಮುಖೇನ ತಿಳಿಸಿದ್ದೇವೆ. ಅವರಿಗೆ ನೀಡಿರುವ ನೊಟೀಸ್‌ಗೆ ಉತ್ತರ ನೀಡಿಲ್ಲ ಅಂತ ಸಹಕಾರಿ ಇಲಾಖೆಗೆ ತಿಳಿಸಿದ್ದೇವೆ ಎಂದು ಹೇಳಿದರು.

ನಾವು ಸಹಕಾರ‌ ಇಲಾಖೆಯು ಸೂಚಿಸುವಂತೆ ಕಾನೂನಾತ್ಮಕವಾಗಿ ನಡೆದುಕೊಳ್ಳುತ್ತೇವೆ. ಅವರು ನಡೆಸಿರುವ ಸಭೆ ಬೈ ಲಾ ವಿರುದ್ಧವಾಗಿದೆ. ಅವಿಶ್ವಾಸ ಮಂಡನೆಗೆ 24 ನಿರ್ದೇಶಕರು ಸಭೆಯಲ್ಲಿ ಭಾಗಿಯಾಗಬೇಕು. ಆದರೇ ಸಭೆಯಲ್ಲಿ 19 ಜನ ಮಾತ್ರ ಇದ್ದರು. ಇದು ಕಾನೂನಾತ್ಮಕವಾಗಿಲ್ಲ ಎಂದು ಬಾಲಕೃಷ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ