AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಇಲ್ಲ: ರ‍್ಯಾಪಿಡೊ ಸಂಸ್ಥೆ ಸ್ಪಷ್ಟನೆ

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್​ ಆಧಾರಿತ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿತ್ತು. ಆದರೆ ಸರ್ಕಾರದ ಆದೇಶವು ವಿದ್ಯುತ್​ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು, ರ‍್ಯಾಪಿಡೊ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಸಂಸ್ಥೆ ಹೇಳಿದೆ.

ರ‍್ಯಾಪಿಡೊ ಬೈಕ್, ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಇಲ್ಲ: ರ‍್ಯಾಪಿಡೊ ಸಂಸ್ಥೆ ಸ್ಪಷ್ಟನೆ
ರ‍್ಯಾಪಿಡೊ
ವಿವೇಕ ಬಿರಾದಾರ
|

Updated on: Mar 13, 2024 | 11:39 AM

Share

ಬೆಂಗಳೂರು, ಮಾರ್ಚ್​ 13: ರಾಜ್ಯ ಸರ್ಕಾರವು ಹಿಂಪಡೆದಿರುವ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ (Electric Bike Taxi) ಆದೇಶವು ರ‍್ಯಾಪಿಡೊ (Rapido) ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ ಎಂದು ರ್ಯಾಪಿಡೊ ಕಂಪನಿ ಸ್ಪಷ್ಟಪಡಿಸಿದೆ. ಹೈಕೋರ್ಟ್ (High Court)​ ಆದೇಶದ ಪ್ರಕಾರ ಕಾರ್ಯನಿರ್ವಹಿಸುತ್ತಿರುವ ರ‍್ಯಾಪಿಡೊಗೆ ಸರ್ಕಾರದ ಆದೇಶ ಅನ್ವಯವಾಗುವುದಿಲ್ಲ. ರಾಜ್ಯ ಸರ್ಕಾರದ ಆದೇಶವು ವಿದ್ಯುತ್​ ಚಾಲಿತ ವಾಹನಗಳ ಓಡಾಟಕ್ಕೆ ಮಾತ್ರ ಸಂಬಂಧಿಸಿದ್ದಾಗಿದ್ದು, ರ‍್ಯಾಪಿಡೊ ಸೇವೆ ಯಥಾಪ್ರಕಾರ ಮುಂದುವರೆಯಲಿದೆ ಎಂದು ಹೇಳಿದೆ.

ಸರ್ಕಾರ ಹಿಂಪಡೆದಿದ್ದು ಏಕೆ?

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್​ ಆಧಾರಿತ ಎಲೆಕ್ಟ್ರಿಕ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ರದ್ದುಪಡಿಸಿತ್ತು.

2021ರಲ್ಲಿ ಜಾರಿಗೆ ಬಂದಿದ್ದ ವಿದ್ಯುತ್​ ಬೈಕ್​ ಟ್ಯಾಕ್ಸಿ

ಸಾರ್ವಜನಿಕ ಸಾರಿಗೆ ಸಂಪರ್ಕ ಕಲ್ಪಿಸಲು ಹಾಗೂ ವಾಹನಗಳ ಸಂಚಾರ ದಟ್ಟಣೆ ಕಡಿಮೆಗೊಳಿಸುವ ಉದ್ದೇಶದಿಂದ 2021ರಲ್ಲಿ ಅಂದಿನ ಸರ್ಕಾರವು, ಕರ್ನಾಟಕ ವಿದ್ಯುತ್​ ಬೈಕ್​​ ಟ್ಯಾಕ್ಸಿ ಸಂಸ್ಥೆಗಳಿಗೆ ಪರವಾನಿಗೆ ನೀಡಿತ್ತು. 2022ರ ಡಿಸೆಂಬರ್​​ನಲ್ಲಿ ಸಾರಿಗೆ ಇಲಾಖೆಯು ಇ-ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಬ್ಲೂಸ್ಪಾರ್ಟ್ ಮತ್ತು ಬೌನ್ಸ್​ ಸಂಸ್ಥೆಗಳಿಗೆ ಪರವಾನಗಿ ನೀಡಿತ್ತು.

ಇದನ್ನೂ ಓದಿ: Viral: ಬೆಂಗಳೂರಿನ ವ್ಯಕ್ತಿಯೊಬ್ಬರು ರ‍್ಯಾಪಿಡೊ ಡ್ರೈವರ್​​ನೊಂದಿಗೆ ನಡೆಸಿದ ಸಂಭಾಷಣೆ ವೈರಲ್

ಬಿಳಿಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಬೈಕ್‌ಗಳ ಮೂಲಕವೂ ಈ ಸೇವೆ ಒದಗಿಸಲು ಸರ್ಕಾರ ಅನುಮತಿ ನೀಡಿತ್ತು. ಇದಕ್ಕೆ ಆಟೊ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಗಳು ವರದಿಯಾಗಿದ್ದವು. ಕೆಲವು ಸವಾರರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರುಗಳು ದಾಖಲಾಗಿದ್ದವು.

ಹಾಗಾಗಿ, ಇ-ಬೈಕ್ ಟ್ಯಾಕ್ಸಿ ಸೇವೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು. ಈ ಸಮಿತಿಯ ವರದಿ ಆಧಾರದ ಮೇಲೆ ಯೋಜನೆಯನ್ನು ರದ್ದುಪಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್