ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ – ರಾಜ್ಯ ಸರ್ಕಾರ ಆದೇಶ

ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ - ರಾಜ್ಯ ಸರ್ಕಾರ ಆದೇಶ
ಬಸವರಾಜ ಬೊಮ್ಮಾಯಿ
Follow us
| Edited By: Ayesha Banu

Updated on:Aug 10, 2021 | 2:38 PM

ಬೆಂಗಳೂರು: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ನೀಡದಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆದೇಶ ಪ್ರಕಟ ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

CM Order

ಆದೇಶ ಪ್ರತಿ

ಇದನ್ನೂ ಓದಿ: ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 1:26 pm, Tue, 10 August 21

ತಾಜಾ ಸುದ್ದಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ