AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ವಯಸ್ಸಿನ ಹೆಣ್ಣು ಜೀವಕ್ಕಾದ ನೋವಿನ ಬಗ್ಗೆ ಸರ್ಕಾರ, ಎಸ್‌ಐಟಿ ಚರ್ಚೆ ಮಾಡುತ್ತಿಲ್ಲ: ಸಂಸದ ಡಿ.ಕೆ.ಸುರೇಶ್​

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ ಹೇಳಿಕೆ ನೀಡಿದ್ದಾರೆ. ಸರ್ಕಾರ ಇದರ ರಕ್ಷಣೆಗೆ ನಿಂತಿರುವುದನ್ನು ನೋಡಿದರೆ ಇದು ಸಿಡಿಗಳಿಂದ ಉಳಿದಿರುವ ಸರ್ಕಾರ ಎಂದೆನಿಸುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಗಳ ವಯಸ್ಸಿನ ಹೆಣ್ಣು ಜೀವಕ್ಕಾದ ನೋವಿನ ಬಗ್ಗೆ ಸರ್ಕಾರ, ಎಸ್‌ಐಟಿ ಚರ್ಚೆ ಮಾಡುತ್ತಿಲ್ಲ: ಸಂಸದ ಡಿ.ಕೆ.ಸುರೇಶ್​
ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್
shruti hegde
| Edited By: |

Updated on: Mar 28, 2021 | 11:59 AM

Share

ಬೆಂಗಳೂರು: ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ ಸರ್ಕಾರವಾಗಲೀ, ಎಸ್‌ಐಟಿಯಾಗಲೀ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಸರ್ಕಾರ ಆರೋಪಿಗಳ ರಕ್ಷಣೆಗೆ ನಿಂತಿರುವುದನ್ನು ನೋಡಿದರೆ ಇದು ಸಿಡಿಗಳಿಂದ ಉಳಿದಿರುವ ಸರ್ಕಾರ ಎಂದೆನಿಸುತ್ತಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ ಹೇಳಿದರು.

ಈ ಸರ್ಕಾರ ಅಭಿವೃದ್ಧಿಯ ಕುರಿತಾಗಿ ಅಥವಾ ನೀರಿನ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ. ಅಕ್ರಮ ಚಟುವಟಿಕೆ ಮುಚ್ಚಿಟ್ಟುಕೊಂಡು ಸರ್ಕಾರ ನಡೆಸುತ್ತಿದ್ದಾರೆ. ಇದನ್ನು ಯಾರು ನಿಯಂತ್ರಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಪ್ರಕರಣ ಮುಚ್ಚಿಹಾಕುವ ಕುತಂತ್ರ ನಡೆಸುತ್ತಿದ್ದಾರೆ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದ್ದಾರೆ. ರಮೇಶ್ ಜಾರಕಿಹೊಳಿ ಅವಾಚ್ಯ ಪದ ಬಳಸಿದ ವಿಚಾರಕ್ಕೆ ಸಂಬಂಧಿಸಿ, ಅವರು ಎದುರಿಗೆ ಸಿಕ್ಕಿದರೆ ಏನನ್ನು ಹೇಳಬೇಕೋ ಹೇಳುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ಹೇಲಿದರು.

ಅವರು ಬಟ್ಟೆ ಬಿಚ್ಚುವುದಕ್ಕೆ ನಾವು ಹೇಳಿದ್ವಾ? ಅವರೇ ಅಲ್ವಾ ಬಟ್ಟೆ ಬಿಚ್ಚಿದ್ದು? ಎಂದು ಪ್ರಶ್ನೆಗೆ, ‘ಸರ್ಕಾರದಲ್ಲಿ ಸಿಎಂ ಇಲ್ಲ, ಗೃಹ ಮಂತ್ರಿಗಳೂ ಕೂಡ ಇಲ್ಲ. ಸರ್ಕಾರ ತಂದವರು ಇವರೇ, ಸರ್ಕಾರ ಬೀಳಿಸೋದು ಇವರೇ ಅಲ್ವಾ? ಇವರಿಂದ ಇಡೀ ಬಿಜೆಪಿಗೆ ಆತಂಕ ಇದೆ.  ಜನರಿಗೆ ಸರ್ಕಾರದ ಕಡೆಯಿಂದ ಒಂದು ಸಂದೇಶ ಹೋಗಬೇಕಾಗಿತ್ತು. ಆದ್ರೆ ಇನ್ಮುಂದೆ ಮಹಿಳೆಯರ ರಕ್ಷಣೆಗೆ ಸರ್ಕಾರ ಇಲ್ಲ ಅಂತ ಆಗಿದೆ ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್, ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ