AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ವಯಸ್ಸಿನ ಹೆಣ್ಣು ಜೀವಕ್ಕಾದ ನೋವಿನ ಬಗ್ಗೆ ಸರ್ಕಾರ, ಎಸ್‌ಐಟಿ ಚರ್ಚೆ ಮಾಡುತ್ತಿಲ್ಲ: ಸಂಸದ ಡಿ.ಕೆ.ಸುರೇಶ್​

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ ಹೇಳಿಕೆ ನೀಡಿದ್ದಾರೆ. ಸರ್ಕಾರ ಇದರ ರಕ್ಷಣೆಗೆ ನಿಂತಿರುವುದನ್ನು ನೋಡಿದರೆ ಇದು ಸಿಡಿಗಳಿಂದ ಉಳಿದಿರುವ ಸರ್ಕಾರ ಎಂದೆನಿಸುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಗಳ ವಯಸ್ಸಿನ ಹೆಣ್ಣು ಜೀವಕ್ಕಾದ ನೋವಿನ ಬಗ್ಗೆ ಸರ್ಕಾರ, ಎಸ್‌ಐಟಿ ಚರ್ಚೆ ಮಾಡುತ್ತಿಲ್ಲ: ಸಂಸದ ಡಿ.ಕೆ.ಸುರೇಶ್​
ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್
shruti hegde
| Edited By: |

Updated on: Mar 28, 2021 | 11:59 AM

Share

ಬೆಂಗಳೂರು: ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ ಸರ್ಕಾರವಾಗಲೀ, ಎಸ್‌ಐಟಿಯಾಗಲೀ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಸರ್ಕಾರ ಆರೋಪಿಗಳ ರಕ್ಷಣೆಗೆ ನಿಂತಿರುವುದನ್ನು ನೋಡಿದರೆ ಇದು ಸಿಡಿಗಳಿಂದ ಉಳಿದಿರುವ ಸರ್ಕಾರ ಎಂದೆನಿಸುತ್ತಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ ಹೇಳಿದರು.

ಈ ಸರ್ಕಾರ ಅಭಿವೃದ್ಧಿಯ ಕುರಿತಾಗಿ ಅಥವಾ ನೀರಿನ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ. ಅಕ್ರಮ ಚಟುವಟಿಕೆ ಮುಚ್ಚಿಟ್ಟುಕೊಂಡು ಸರ್ಕಾರ ನಡೆಸುತ್ತಿದ್ದಾರೆ. ಇದನ್ನು ಯಾರು ನಿಯಂತ್ರಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಪ್ರಕರಣ ಮುಚ್ಚಿಹಾಕುವ ಕುತಂತ್ರ ನಡೆಸುತ್ತಿದ್ದಾರೆ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದ್ದಾರೆ. ರಮೇಶ್ ಜಾರಕಿಹೊಳಿ ಅವಾಚ್ಯ ಪದ ಬಳಸಿದ ವಿಚಾರಕ್ಕೆ ಸಂಬಂಧಿಸಿ, ಅವರು ಎದುರಿಗೆ ಸಿಕ್ಕಿದರೆ ಏನನ್ನು ಹೇಳಬೇಕೋ ಹೇಳುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ಹೇಲಿದರು.

ಅವರು ಬಟ್ಟೆ ಬಿಚ್ಚುವುದಕ್ಕೆ ನಾವು ಹೇಳಿದ್ವಾ? ಅವರೇ ಅಲ್ವಾ ಬಟ್ಟೆ ಬಿಚ್ಚಿದ್ದು? ಎಂದು ಪ್ರಶ್ನೆಗೆ, ‘ಸರ್ಕಾರದಲ್ಲಿ ಸಿಎಂ ಇಲ್ಲ, ಗೃಹ ಮಂತ್ರಿಗಳೂ ಕೂಡ ಇಲ್ಲ. ಸರ್ಕಾರ ತಂದವರು ಇವರೇ, ಸರ್ಕಾರ ಬೀಳಿಸೋದು ಇವರೇ ಅಲ್ವಾ? ಇವರಿಂದ ಇಡೀ ಬಿಜೆಪಿಗೆ ಆತಂಕ ಇದೆ.  ಜನರಿಗೆ ಸರ್ಕಾರದ ಕಡೆಯಿಂದ ಒಂದು ಸಂದೇಶ ಹೋಗಬೇಕಾಗಿತ್ತು. ಆದ್ರೆ ಇನ್ಮುಂದೆ ಮಹಿಳೆಯರ ರಕ್ಷಣೆಗೆ ಸರ್ಕಾರ ಇಲ್ಲ ಅಂತ ಆಗಿದೆ ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್, ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು