AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬೇಡ ಎಂಬ ಮನವಿಗೆ ಒಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ: ಸಿಎಂ ಬೊಮ್ಮಾಯಿ

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬರುವುದು ಬೇಡ ಎಂದು ಹೇಳಿದ್ದೇವೆ. ಅದನ್ನ ಕೇಂದ್ರ ಸಾರಿಗೆ ಸಚಿವರು ಒಪ್ಪಿದ್ದಾರೆ. ರಾಜ್ಯದ ಹಲವು ನಗರದಲ್ಲಿ ರೈಲ್ವೆ ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬೇಡ ಎಂಬ ಮನವಿಗೆ ಒಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ: ಸಿಎಂ ಬೊಮ್ಮಾಯಿ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jan 06, 2023 | 6:56 AM

Share

ಬೆಂಗಳೂರು: ಬನ್ನೇರುಘಟ್ಟ (Bannerghatta) ಪ್ರದೇಶದಲ್ಲಿ ಹೆದ್ದಾರಿ ಬೇಡವೆಂಬ ಮನವಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಒಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕೇಂದ್ರ ಸಚಿವರೊಂದಿಗಿನ ಸಭೆಯ ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ (National Highway) ಹೊರತು ಪಡಿಸಿ ರೈಲ್ವೆ ಅಂಡರ್ ಬ್ರಿಡ್ಜ್, ಓವರ್ ಬ್ರಿಡ್ಜ್ ನಿರ್ಮಾಣಕ್ಕೆ 1000 ಕೋಟಿ ರೂಪಾಯಿ ಕೊಡಲು ಒಪ್ಪಿದ್ದಾರೆ ಎಂದರು. ಅಲ್ಲದೆ, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಫ್ಲೈ ಓವರ್ (Flyover) ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ. ಸಚಿವರು ಎಲ್ಲ ಕಡೆ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಗಳು 46,800 ಕೋಟಿ ಕಾಮಗಾರಿ ನಡೆಯುತ್ತಿದೆ. ಇನ್ನು 1 ಲಕ್ಷ ಕೋಟಿಯ ಕಾಮಗಾರಿ ನಡೆಯಬೇಕು. ಫಾಸ್ಟ್ ಟ್ರಾಕ್​​ನಲ್ಲಿ ಪೂರೈಸಲು ಚರ್ಚೆ ಮಾಡಿದ್ದೇವೆ. ಬನ್ನೇರುಘಟ್ಟ ಪ್ರದೇಶದಲ್ಲಿ ಹೆದ್ದಾರಿ ಬರುವುದು ಬೇಡ ಎಂದು ಹೇಳಿದ್ದೇವೆ. ಅದನ್ನ ಒಪ್ಪಿದ್ದಾರೆ. ರಾಜ್ಯದ ಹಲವು ನಗರದಲ್ಲಿ ರೈಲ್ವೆ ಅಂಡರ್ ಪಾಸ್, ಓವರ್ ಬ್ರಿಡ್ಜ್ ನಿರ್ಮಾಣ ಆಗಲಿದೆ ಎಂದರು.

ಇದನ್ನೂ ಓದಿ: Nitin Gadkari Karnataka Visit: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿ ವೀಕ್ಷಿಸಿದ ನಿತಿನ್ ಗಡ್ಕರಿ

ಮೆಟ್ರೋದಿಂದ ಬೇರೆ ಕಡೆ ಹೋಗಲು ಡಬ್ಬಲ್ ಡೆಕ್ಕರ್ ಬಸ್ ಹಾಗೂ ಮೋನೊ ರೈಲು ನಿರ್ಮಾಣ ಸಂಬಂಧ ಸಭೆಯಲ್ಲಿ ಚರ್ಚೆ ಆಗಿದೆ. ರಿಂಗ್ ರಸ್ತೆ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಶಿರಾಡಿಘಾಟ್‌ನಲ್ಲಿ 4 ಲೈನ್ ಮಾಡಲು ತೀರ್ಮಾನ ಮಾಡಲಾಗಿದೆ. 4 ಲೈನ್ ನಿರ್ಮಾಣ ಕಾಮಗಾರಿಗೆ ಮಾರ್ಚ್‌ನಲ್ಲಿ ಚಾಲನೆ ನೀಡುತ್ತೇವೆ. ಬೆಂಗಳೂರು-ಮೈಸೂರು ರಸ್ತೆ ಫೆಬ್ರವರಿ, ಮಾರ್ಚ್‌ನಲ್ಲಿ ಉದ್ಘಾಟನೆ ಮಾಡಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 am, Fri, 6 January 23

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು