AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕಿಲ್ಲ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕೆ ನಿವೇಶನ ಹಂಚಿಕೆ ಇಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ ಹೊರಡಿಸಿದೆ. ನಿವೇಶನ ಹಂಚಿಕೆಗೆ ಅರ್ಜಿ ಕೋರಿ ಅಧಿಸೂಚನೆ ಹೊರಡಿಸದಂತೆ ನಿರ್ಬಂಧ ಹೇರಲಾಗಿದೆ. ನ್ಯಾ. ಕೃಷ್ಣ ಎಸ್.ದೀಕ್ಷಿತ್ ಮತ್ತು ‌ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಲಾಗಿದೆ.

ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕಿಲ್ಲ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ
ನಿವೇಶನ, ಹೈಕೋರ್ಟ್
Ramesha M
| Edited By: |

Updated on:Jan 18, 2024 | 9:29 PM

Share

ಬೆಂಗಳೂರು, ಜನವರಿ 18: ಶಿವರಾಮ ಕಾರಂತ (shivaram karantha) ಬಡಾವಣೆಯಲ್ಲಿ ಸದ್ಯಕ್ಕೆ ನಿವೇಶನ ಹಂಚಿಕೆ ಇಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ ಹೊರಡಿಸಿದೆ. ನಿವೇಶನ ಹಂಚಿಕೆಗೆ ಅರ್ಜಿ ಕೋರಿ ಅಧಿಸೂಚನೆ ಹೊರಡಿಸದಂತೆ ನಿರ್ಬಂಧ ಹೇರಲಾಗಿದೆ. ನ್ಯಾ. ಕೃಷ್ಣ ಎಸ್.ದೀಕ್ಷಿತ್ ಮತ್ತು ‌ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಲಾಗಿದೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ ಕಾಮಗಾರಿ ಮುಂದುವರಿಸಲು ಅಸ್ತು ಎನ್ನಲಾಗಿದೆ. ಸಮಸ್ಯೆಗಳನ್ನು ಪರಿಹರಿಸದೆ ಬಿಡಿಎಯಿಂದ‌‌ ನಿವೇಶನ ಹಂಚಿಕೆ ಆರೋಪ‌ ಮಾಡಿದ್ದು,  ಹಲವರು ಸುಪ್ರೀಂಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಅರ್ಜಿಗಳನ್ನು ಹೈಕೋರ್ಟ್​ಗೆ ವರ್ಗಾಯಿಸಿತ್ತು.

ಶಿವರಾಮ ಕಾರಂತ ಬಡಾವಣೆಯ ದಾಖಲೆ ಸಮಿತಿ ಬಳಿ ಇರುವ ಹಿನ್ನೆಲೆ ಸಮಿತಿ ದಾಖಲೆಗಳನ್ನು ಬಿಡಿಎಗೆ ಹಸ್ತಾಂತರಿಸದೇ ಇಟ್ಟುಕೊಂಡಿದೆ. ದಾಖಲೆಯಿರುವ ಕೊಠಡಿ ಬೀಗದ‌ ಕೀ ಸಮಿತಿಯ ಬಳಿ ಇದೆ ಎಂದು ಬಿಡಿಎ ವಾದ ಮಂಡಿಸಿದೆ. ದಾಖಲೆಯಿರುವ ಕೊಠಡಿಗೆ ಮತ್ತೊಂದು ಬೀಗ ಹಾಕಿ ಕೀ ನೀಡುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: BDA: ಶಿವರಾಮ ಕಾರಂತ ಬಡಾವಣೆಗಾಗಿ ಭೂಸ್ವಾಧೀನ, ಬೆಳೆದು ನಿಂತ ಹಣ್ಣಿನ ಗಿಡಗಳನ್ನ ದಿಢೀರನೆ ಕತ್ತರಿಸಿ ಹಾಕಿದರು ಬಿಡಿಎ ಅಧಿಕಾರಿಗಳು

2008 ರಲ್ಲಿ 3456 ಎಕರೆ ಜಮೀನನ್ನ ಬಿಡಿಎ ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ 2008 ರ ಆಧಾರದ ಮೇಲೆ ಪರಿಹಾರ ನೀಡುವುದಕ್ಕೆ ಮಾಡಿದ್ದ ನಿರ್ಧಾರದ ವಿರುದ್ಧ ಭೂಮಿ ನೀಡಿದ ರೈತರು ಅಸಮಧಾನ ವ್ಯಕ್ತಪಡಿಸಿದ್ದರು. ಹಾಗೆನೇ ನೊಟಿಫಿಕೇಷನ್‌ಗೂ ಮೊದಲೆ ಕಟ್ಟಡ ನಿರ್ಮಿಸಿದ್ದವರು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನ ಪರಿಗಣಿಸಿದ ಸುಪ್ರೀಂ ನ್ಯಾ. ಚಂದ್ರಶೇಖರ್ ಸಮಿತಿ ರಚನೆ ಮಾಡಿ ವಿವಾದ ಇತ್ಯರ್ಥ ಪಡಿಸುವಂತೆ ಸೂಚನೆ ಕೊಟ್ಟಿತ್ತು. ಅದರಂತೆ ಸತತ ಮೂರು ವರ್ಷ ಪರಿಶೀಲನೆ ನಡೆಸಿದ ಸಮಿತಿ ಲೇಔಟ್ ವಿಚಾರದಲ್ಲಿ ಎದ್ದಿದ್ದ ಎಲ್ಲಾ ಗೊಂದಲಗಳನ್ನೂ ನಿವಾರಣೆ ಮಾಡಲಾಗಿತ್ತು.

ಇದನ್ನೂ ಓದಿ: ಶಿವರಾಮಕಾರಂತ ಬಡಾವಣೆ ಸೈಟ್ ಹಂಚಿಕೆ ವಿವಾದ; ಫಲಾನುಭವಿಗಳಿಗೆ ಬಿಡಿಎಯಿಂದ ಗುಡ್​ ನ್ಯೂಸ್

ಕೆಲ ರಾಜಕಾರಣಿಗಳ ಜಮೀನು ಶಿವರಾಮ ಕಾರಂತ ಲೇಔಟ್​ನಲ್ಲಿದ್ದು, ಕೆಲವರು ನಿವೇಶನಗಳನ್ನ ಮಾಡ್ತಿದ್ದಾರಂತೆ. ಅಂತವರ ಮೇಲೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುತ್ತಿಲ್ಲವಂತೆ. ಅದರಲ್ಲೂ ಪ್ರಭಾವಿ ಸಚಿವರು ಸೇರಿದಂತೆ ಕೆಲವರು ಬೇನಾಮಿ ಹೆಸರಲ್ಲಿ ನಿವೇಶನ ಮಾಡಿ ಮಾರಾಟ ಮಾಡುತ್ತಿದ್ದಾರಂತೆ. ಆದರೆ ಅವರಿಗೆ ನೋಟಿಸ್ ಕೊಡದೇ ಕೇವಲ ಅರ್ಧ ಎಕರೆ ಜಮೀನು ಇರುವ ಬಡಪಾಯಿಗಳನ್ನ ಟಾರ್ಗೆಟ್ ಮಾಡಿತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 pm, Thu, 18 January 24

Follow Us
Ramesha M
Ramesha M
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?