AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಇಂದು ಇಡೀ ದಿನ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

Namma Metro: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಹೊಸದಾಗಿ ನಿರ್ಮಿಸಲಾದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವಿನ ನಮ್ಮ ಮೆಟ್ರೋ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೆ.ಆರ್.ಪುರಂನಿಂದ ಗರುಡಾಚಾರ್‌ಪಾಳ್ಯ ನಡುವೆ ನಮ್ಮ ಮೆಟ್ರೋ ಸೇವೆ ಇರುವುದಿಲ್ಲ.

ಪ್ರಯಾಣಿಕರ ಗಮನಕ್ಕೆ: ಇಂದು ಇಡೀ ದಿನ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ
ನಮ್ಮ ಮೆಟ್ರೋ
TV9 Web
| Edited By: |

Updated on: Sep 21, 2023 | 7:31 AM

Share

ಬೆಂಗಳೂರು (ಸೆಪ್ಟೆಂಬರ್ 21) ನಗರದ ನಮ್ಮ ಮೆಟ್ರೋದ (Namma Metro) ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು (ಸೆಪ್ಟೆಂಬರ್.21) ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್‌ಸಿಎಲ್‌ ರದ್ದುಪಡಿಸಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ತಿಳಿಸಿದೆ.

ಉಳಿದಂತೆ ವೈಟ್‌ಫೀಲ್ಡ್‌ (ಕಾಡುಗೋಡಿ) ಮತ್ತು ಗರುಡಾಚಾರಪಾಳ್ಯ ನಡುವೆ ರೈಲು ಸೇವೆ ಎಂದಿನಂತೆ ಇರಲಿದೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲ್ವೆ ಸೇವೆ ಲಭ್ಯವಿದೆ. ಮಧ್ಯಾಹ್ನ 1.30ರವರೆಗೆ ಮತ್ತು ಸಂಜೆ 4.30ರ ಬಳಿಕ ಬೈಯ್ಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ರಾತ್ರಿ 11ರವರೆ ಮೆಟ್ರೋ ಸೇವೆ ಎಂದಿನಂತೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರು ರೈಲ್ವೆ ಸಂಚಾರದ ವ್ಯತ್ಯಯ ಗಮನಿಸಿ ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಕೋರಿದೆ.

ಇದನ್ನೂ ಓದಿ: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ: ಎಲ್ಲೆಲ್ಲಿ? 

ಹೊಸ ವಿಸ್ತರಿತ ಮಾರ್ಗವಾದ ನಮ್ಮ ಮೆಟ್ರೋದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಅಳವಡಿಸಲಾಗಿರುವ ಮೆಟ್ರೋ ರೈಲು ಮಾರ್ಗದ ಸುರಕ್ಷತಾ ತಪಾಸಣೆ ಇಂದು ನಡೆಯಲಿದೆ, ಇದು 2 ಕಿ.ಮೀ. ಮಾರ್ಗವಾಗಿದ್ದು, ಇದಕ್ಕೆ ಮೆಟ್ರೋ ಸುರಕ್ಷತಾ ಆಯುಕ್ತರು ತಪಾಸಣೆ ಬಳಿಕ ಗ್ರೀನ್‌ ಸಿಗ್ನಲ್‌ ನೀಡಿದರೆ, ಕೆಂಗೇರಿಯಿಂದ ವೈಟ್‌ಫೀಲ್ಡ್‌ವರೆಗೆ ತಡೆರಹಿತ ಸಂಚಾರ ನಡೆಸಬಹುದಾಗಿದೆ. ಇದರಿಂದ ಬೆಂಗಳೂರಿನ ಐಟಿ ಹಬ್‌ ಆಗಿರುವ ವೈಟ್‌ಫೀಲ್ಡ್‌ನ ಸಾವಿರಾರು ಟೆಕ್ಕಿಗಳಿಗೆ ನೆರವಾಗಲಿದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್