AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ತೆರಿಗೆ ವಿಧಿಸಲು ಚಿಂತನೆ ನಡೆಸಿದೆ ಎಂಬ ಸರ್ಕಾರದ ಮೂಲಗಳಿಂದ ತಿಳಿದುಬಂದಿತ್ತು. ಈ ವಿಚಾರ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್ಚತ್ತ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​
ಡಿಸಿಎಂ ಡಿಕೆ ಶಿವಮಕುಮಾರ್​
Anil Kalkere
| Edited By: ವಿವೇಕ ಬಿರಾದಾರ|

Updated on: Oct 07, 2023 | 1:06 PM

Share

ಬೆಂಗಳೂರು ಅ.07: ನಗರದಲ್ಲಿನ ಸಂಚಾರ ದಟ್ಟಣೆಯನ್ನು (Bengaluru Traffic) ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ (Tax) ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಮಾತನಾಡಿ ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು ಎಂದು ಹೇಳಿದರು.

ಹಳ್ಳಿಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು ಆ ಭಾಗದ ಶಾಸಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ಮಾಡುವಂತೆ ಹೇಳಿದ್ದಾರೆ. ತಾವು, ಮಾಧ್ಯಮದವರು ಕೂಡ ಅವರ ಪರವಾಗಿ ಮಾತಾಡುತ್ತಿದ್ದೀರಿ ಒಳ್ಳೆದಾಗಲಿ ಎಂದು ಜಾರಿಕೊಂಡರು.

ಕಾಂಗ್ರೆಸ್​ಗೆ ಶೇ20 ರಷ್ಟು ಲಿಂಗಾಯತರು ಮತ ಹಾಕಿದ್ದಾರೆ. ಏಳು ಜನ ಸಚಿವರನ್ನು ಮಾಡಿದ್ದೇವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು ಅದು ಸೀಕ್ರೆಟ್ ಬ್ಯಾಲೆಟ್, ಯಾರು ಎಷ್ಟು ವೋಟ್ ಹಾಕಿದ್ದಾರೆ ಅನ್ನೋದು ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲಾ ಜನಾಂಗದವರು ನಮ್ಮ ಪಕ್ಷಕ್ಕೆ ಅಧಿಕಾರ ತಂದಿದ್ದಾರೆ. ಎಲ್ಲರೂ ಸೇರಿಯೇ 136 ಸ್ಥಾನಗಳನ್ನು ನೀಡಿದ್ದಾರೆ ಎಂದು ಪ್ರಕಾಶ್ ರಾಥೋಡ್ ಹೇಳಿಕೆಗೆ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!