AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ತೆರಿಗೆ ವಿಧಿಸಲು ಚಿಂತನೆ ನಡೆಸಿದೆ ಎಂಬ ಸರ್ಕಾರದ ಮೂಲಗಳಿಂದ ತಿಳಿದುಬಂದಿತ್ತು. ಈ ವಿಚಾರ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್ಚತ್ತ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​
ಡಿಸಿಎಂ ಡಿಕೆ ಶಿವಮಕುಮಾರ್​
Anil Kalkere
| Edited By: ವಿವೇಕ ಬಿರಾದಾರ|

Updated on: Oct 07, 2023 | 1:06 PM

Share

ಬೆಂಗಳೂರು ಅ.07: ನಗರದಲ್ಲಿನ ಸಂಚಾರ ದಟ್ಟಣೆಯನ್ನು (Bengaluru Traffic) ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ (Tax) ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಮಾತನಾಡಿ ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು ಎಂದು ಹೇಳಿದರು.

ಹಳ್ಳಿಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು ಆ ಭಾಗದ ಶಾಸಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ಮಾಡುವಂತೆ ಹೇಳಿದ್ದಾರೆ. ತಾವು, ಮಾಧ್ಯಮದವರು ಕೂಡ ಅವರ ಪರವಾಗಿ ಮಾತಾಡುತ್ತಿದ್ದೀರಿ ಒಳ್ಳೆದಾಗಲಿ ಎಂದು ಜಾರಿಕೊಂಡರು.

ಕಾಂಗ್ರೆಸ್​ಗೆ ಶೇ20 ರಷ್ಟು ಲಿಂಗಾಯತರು ಮತ ಹಾಕಿದ್ದಾರೆ. ಏಳು ಜನ ಸಚಿವರನ್ನು ಮಾಡಿದ್ದೇವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು ಅದು ಸೀಕ್ರೆಟ್ ಬ್ಯಾಲೆಟ್, ಯಾರು ಎಷ್ಟು ವೋಟ್ ಹಾಕಿದ್ದಾರೆ ಅನ್ನೋದು ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲಾ ಜನಾಂಗದವರು ನಮ್ಮ ಪಕ್ಷಕ್ಕೆ ಅಧಿಕಾರ ತಂದಿದ್ದಾರೆ. ಎಲ್ಲರೂ ಸೇರಿಯೇ 136 ಸ್ಥಾನಗಳನ್ನು ನೀಡಿದ್ದಾರೆ ಎಂದು ಪ್ರಕಾಶ್ ರಾಥೋಡ್ ಹೇಳಿಕೆಗೆ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ