AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ತೆರಿಗೆ ವಿಧಿಸಲು ಚಿಂತನೆ ನಡೆಸಿದೆ ಎಂಬ ಸರ್ಕಾರದ ಮೂಲಗಳಿಂದ ತಿಳಿದುಬಂದಿತ್ತು. ಈ ವಿಚಾರ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ ಎಚ್ಚತ್ತ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ಟ್ಯಾಕ್ಸ್ ಹಾಕುವುದಿಲ್ಲ: ಡಿಕೆ ಶಿವಕುಮಾರ್​​​
ಡಿಸಿಎಂ ಡಿಕೆ ಶಿವಮಕುಮಾರ್​
Anil Kalkere
| Edited By: |

Updated on: Oct 07, 2023 | 1:06 PM

Share

ಬೆಂಗಳೂರು ಅ.07: ನಗರದಲ್ಲಿನ ಸಂಚಾರ ದಟ್ಟಣೆಯನ್ನು (Bengaluru Traffic) ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ (Tax) ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಟಿವಿ9 ಡಿಜಿಟಲ್​​ನಲ್ಲಿ ಪ್ರಕಟವಾಗುತ್ತಿದ್ದಂತೆ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಮಾತನಾಡಿ ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು ಎಂದು ಹೇಳಿದರು.

ಹಳ್ಳಿಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ಸಂಚಾರ ದಟ್ಟಣೆ ತೆರಿಗೆ: ಸರ್ಕಾರಕ್ಕೆ ಶಿಫಾರಸು

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು ಆ ಭಾಗದ ಶಾಸಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ಮಾಡುವಂತೆ ಹೇಳಿದ್ದಾರೆ. ತಾವು, ಮಾಧ್ಯಮದವರು ಕೂಡ ಅವರ ಪರವಾಗಿ ಮಾತಾಡುತ್ತಿದ್ದೀರಿ ಒಳ್ಳೆದಾಗಲಿ ಎಂದು ಜಾರಿಕೊಂಡರು.

ಕಾಂಗ್ರೆಸ್​ಗೆ ಶೇ20 ರಷ್ಟು ಲಿಂಗಾಯತರು ಮತ ಹಾಕಿದ್ದಾರೆ. ಏಳು ಜನ ಸಚಿವರನ್ನು ಮಾಡಿದ್ದೇವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು ಅದು ಸೀಕ್ರೆಟ್ ಬ್ಯಾಲೆಟ್, ಯಾರು ಎಷ್ಟು ವೋಟ್ ಹಾಕಿದ್ದಾರೆ ಅನ್ನೋದು ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲಾ ಜನಾಂಗದವರು ನಮ್ಮ ಪಕ್ಷಕ್ಕೆ ಅಧಿಕಾರ ತಂದಿದ್ದಾರೆ. ಎಲ್ಲರೂ ಸೇರಿಯೇ 136 ಸ್ಥಾನಗಳನ್ನು ನೀಡಿದ್ದಾರೆ ಎಂದು ಪ್ರಕಾಶ್ ರಾಥೋಡ್ ಹೇಳಿಕೆಗೆ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ