AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ವ್ಯಕ್ತಿಯ ಪಾಸ್​​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ​​ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಕ್ರಿಮಿನಲ್ ಕೇಸ್ ಎದುರಿಸುತ್ತಿರುವ ವ್ಯಕ್ತಿಯ ಪಾಸ್​​ಪೋರ್ಟ್​ ನವೀಕರಿಸಲು ಸಾಧ್ಯವಿಲ್ಲ: ಹೈಕೋರ್ಟ್
ಹೈಕೋರ್ಟ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Dec 05, 2023 | 10:58 AM

Share

ಬೆಂಗಳೂರು, ಡಿಸೆಂಬರ್ 05: ಕ್ರಿಮಿನಲ್ (Criminal) ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ​​ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ (High Court) ಸೋಮವಾರ ಎತ್ತಿಹಿಡಿದಿದೆ.

ಸಂತೋಷಬೀಜಾಡಿ ಶ್ರೀನಿವಾಸ ಅವರ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, “ವ್ಯಕ್ತಿಯ ಕ್ರಮಿನಿನಲ್​ ಮೊಕದ್ದಮೆಯನ್ನು ಪರಿಗಣಿಸದೆ ಆತನಿಗೆ ಪಾಸ್‌ಪೋರ್ಟ್‌ನ ವಿತರಣೆ ಅಥವಾ ನವೀಕರಣ/ಮರು ನೀಡುವಂತೆ ಪಾಸ್‌ಪೋರ್ಟ್ ಕಾಯ್ದೆಯಲ್ಲಿ ಎಲ್ಲಿಯೂ ಹೇಳಿಲ್ಲ” ಎಂದು ಹೇಳಿದರು.

ಸೆಕ್ಷನ್ 6(2)(ಎಫ್) ಅಡಿಯಲ್ಲಿ ಪಾಸ್​ಪೋರ್ಟ್ ವಿತರಣೆಗೆ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳ ಪ್ರಕಾರ​​ ಕ್ರಮಿನಿಲ್​ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್, ನವೀಕರಣ ಅಥವಾ ಮರು ವಿತರಣೆ ನೀಡುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಸಂಬಂಧದಿಂದ ಪತ್ನಿ ಪತಿಯ ಯುಐಡಿಎಐ ಮಾಹಿತಿ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್​​

ಆದಾಗ್ಯೂ, ಸಂತೋಷಬೀಜಾಡಿ ಶ್ರೀನಿವಾಸ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಿಚಾರಣೆ ನಡೆಸುತ್ತಿರವ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು ಮತ್ತು ಅಲ್ಪಾವಧಿಯ ಪಾಸ್‌ಪೋರ್ಟ್ ಅನ್ನು ನೀಡುವಂತೆ ಕೋರಬಹುದು. ಆದರೆ ಸೆಷನ್ಸ್ ನ್ಯಾಯಾಲಯವು ಅಂತಹ ಅರ್ಜಿಯನ್ನು ಕಾಯ್ದೆಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಏಪ್ರಿಲ್ 11, 2014 ರಂದು ಅರ್ಜಿದಾರ ಶ್ರೀನಿವಾಸ ಅವರಿಗೆ ಪಾಸ್‌ಪೋರ್ಟ್ ನೀಡಲಾಯಿತು, ಇದು ಏಪ್ರಿಲ್ 10, 2024 ರವರೆಗೆ ಮಾನ್ಯವಾಗಿತ್ತು. ಈ ಅವಧಿಯಲ್ಲಿ, ಅರ್ಜಿದಾರರು ಸೆಕ್ಷನ್ 302, 201, 120-ಬಿ ಮತ್ತು 182 ರ ಅಡಿಯಲ್ಲಿ ಅಪರಾಧ ಎಸಗಿದ್ದಾರೆ.

ತುಮಕೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಶ್ರೀನಿವಾಸ ಪಾಸ್‌ಪೋರ್ಟ್ ಮರು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯು ಕ್ರಿಮಿನಲ್ ಪ್ರಕರಣದ ಕಾರಣದಿಂದ ಅವರ ಅರ್ಜಿಯನ್ನು ತಿರಸ್ಕರಿಸಿತು. ಹೀಗಾಗಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ