AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಹತ್ವದ ಅಫಿಡವಿಟ್ ಸಲ್ಲಿಸಿದೆ. ಪ್ರಯಾಣಿಕರ ಸುರಕ್ಷತೆ, ವಿಮೆ ಇಲ್ಲದಿರುವುದು ಹಾಗೂ ಅಪಘಾತಗಳ ಭೀತಿಯನ್ನು ಸರ್ಕಾರ ಕೋರ್ಟ್‌ ಮುಂದೆ ಇಟ್ಟಿದೆ. ಇದರ ನಡುವೆ, ಬೆಂಗಳೂರಿನ ಕೋರಮಂಗಲ ಸೇರಿದಂತೆ ಹಲವೆಡೆ ಆರ್‌ಟಿಒ ಅಧಿಕಾರಿಗಳು ದಾಳಿ ನಡೆಸಿ ನೂರಾರು ಅನಧಿಕೃತ ಓಲಾ, ಊಬರ್ ಹಾಗೂ ರಾಪಿಡೋ ಬೈಕ್‌ಗಳನ್ನು ಸೀಜ್ ಮಾಡಿದ್ದಾರೆ.

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on:Aug 11, 2026 | 11:07 AM

Share

ಮುಖ್ಯಾಂಶಗಳು

  • ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನಿರಾಕರಿಸಿ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ.
  • ರಸ್ತೆ ಸುರಕ್ಷತೆ ಹಾಗೂ ವಿಮಾ ರಕ್ಷಣೆ ಇಲ್ಲದಿರುವುದನ್ನು ಮುಂದಿಟ್ಟ ಸಾರಿಗೆ ಇಲಾಖೆ.
  • ಬೆಂಗಳೂರಿನಲ್ಲಿ ಆರ್‌ಟಿಒ ಭರ್ಜರಿ ದಾಳಿ; ಎರಡು ದಿನಗಳಲ್ಲಿ ನೂರಾರು ಬೈಕ್‌ಗಳು ಸೀಜ್‌.

ಬೆಂಗಳೂರು, ಆಗಸ್ಟ್ 11: ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳಿಗೆ (Bike Taxis) ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಭಾರಿ ಬಿಗ್ ಶಾಕ್ ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿದ ಕಾರಣಗಳೇನು?

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿರುವ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ. ಅದಕ್ಕಾಗಿ ಸರ್ಕಾರ ಪ್ರಮುಖವಾಗಿ ರಸ್ತೆ ಸುರಕ್ಷತೆ ಹಾಗೂ ಪ್ರಯಾಣಿಕರ ಹಿತರಕ್ಷಣೆಯ ಕಾರಣಗಳನ್ನು ಮುಂದಿಟ್ಟಿದೆ.

  • ಸುರಕ್ಷತೆ ಮತ್ತು ವಿಮೆಯ ಕೊರತೆ: ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಯಾವುದೇ ಸೂಕ್ತ ಸುರಕ್ಷತೆ ಇರುವುದಿಲ್ಲ. ಅಷ್ಟೇ ಅಲ್ಲದೆ, ಇಂತಹ ವಾಹನಗಳಿಗೆ ಯಾವುದೇ ಅಧಿಕೃತ ವಿಮಾ ರಕ್ಷಣೆ (Insurance Cover) ಇರುವುದಿಲ್ಲ.
  • ಹೆಚ್ಚುತ್ತಿರುವ ಅಪಘಾತಗಳು: ದ್ವಿಚಕ್ರ ವಾಹನಗಳಲ್ಲಿ ಅಪಘಾತಗಳು ಸಂಭವಿಸುವ ಮತ್ತು ಸಾವು-ನೋವುಗಳು ಸಂಭವಿಸುವ ಪ್ರಮಾಣ ತೀರಾ ಹೆಚ್ಚಾಗಿರುತ್ತದೆ.
  • ಕಾಯ್ದೆಯಲ್ಲಿ ಉಲ್ಲೇಖವಿಲ್ಲ: ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ (Motor Vehicles Act) ‘ಬೈಕ್ ಟ್ಯಾಕ್ಸಿ’ ಎಂಬ ಪದದ ಯಾವುದೇ ಅಧಿಕೃತ ವ್ಯಾಖ್ಯಾನ ಅಥವಾ ನಿಯಮಾವಳಿಗಳೇ ಇಲ್ಲ ಎಂದು ಸರ್ಕಾರ ಸುಪ್ರೀಂಕೋರ್ಟ್‌ಗೆ ಸ್ಪಷ್ಟಪಡಿಸಿದೆ.

2 ದಿನದಲ್ಲಿ ನೂರಾರು ಬೈಕ್ ಸೀಜ್!

ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಸಾರಿಗೆ ಇಲಾಖೆಯ ಜಾರಿ ವಿಭಾಗದ ಕಾರ್ಯಾಚರಣೆ ಎರಡನೇ ದಿನವೂ ಭರ್ಜರಿಯಾಗಿ ಮುಂದುವರಿದಿದೆ. ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿಗಳು ಓಲಾ, ಊಬರ್ ಹಾಗೂ ರಾಪಿಡೋ ಸೇರಿದಂತೆ ವಿವಿಧ ಆ್ಯಪ್ ಆಧಾರಿತ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ.

ಪ್ರಮುಖವಾಗಿ ಬೆಂಗಳೂರಿನ ಕೋರಮಂಗಲ ಆರ್‌ಟಿಒ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಇಂದು ಒಂದೇ ದಿನ ಅಧಿಕಾರಿಗಳು 85ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಅನಧಿಕೃತ ಸೇವೆಗಳಿಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆಯು ಒಟ್ಟು 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ನಿನ್ನೆ ಒಂದೇ ದಿನ ಬರೋಬ್ಬರಿ 256 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿತ್ತು. ಆ ಮೂಲಕ ಕೇವಲ ಎರಡು ದಿನಗಳಲ್ಲಿ ನೂರಾರು ಬೈಕ್‌ಗಳನ್ನು ಜಪ್ತಿ ಮಾಡುವ ಮೂಲಕ ಸಾರಿಗೆ ಇಲಾಖೆ ಖಡಕ್ ಮುನ್ನೆಚ್ಚರಿಕೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 am, Tue, 11 August 26

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?