ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಕೆ.ಹೆಚ್​.ಮುನಿಯಪ್ಪ

ಹೊಸ ಎಪಿಎಲ್​, ಬಿಪಿಎಲ್​ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಏನು ಕಾರಣ ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದರು.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಕೆ.ಹೆಚ್​.ಮುನಿಯಪ್ಪ
ಸಚಿವ ಕೆ. ಹೆಚ್​ ಮುನಿಯಪ್ಪ
Edited By: ವಿವೇಕ ಬಿರಾದಾರ

Updated on: Aug 18, 2023 | 2:51 PM

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಮುಂದಾವರಿಗೆ ಸರ್ಕಾರ ನಿರಾಶೆ ಮೂಡಿಸಿದೆ. ಹೌದು ಹೊಸ ಎಪಿಎಲ್ (APL)​, ಬಿಪಿಎಲ್ (BPL)​ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ. ಕಾರಣ ಏನು ಅಂತ ಸದ್ಯದರಲ್ಲೇ ಹೇಳುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ (KH Muniyappa) ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸುಧಾಮ್​ ದಾಸ್​ಗೆ ಎಂಎಲ್​ಸಿ ಸ್ಥಾನ ನೀಡುವುದನ್ನು ವಿರೋಧಿಸಿ ಪತ್ರ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿರುವುದು ನಿಜ ಎಂದರು.

ಸುಧಾಮ್ ದಾಸ್ ಈಗಷ್ಟೇ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಂದಿಷ್ಟು ದಿನಗಳ ಕಾಲ ಸುಧಾಮ್ ದಾಸ್ ಪಕ್ಷಕ್ಕೆ ಕೆಲಸ ಮಾಡಲಿ. ಪಕ್ಷಕ್ಕೆ ದುಡಿದ ದಲಿತ ನಾಯಕರಿಗೆ ಅವಕಾಶ ನೀಡಲಿ ಎಂಬುದಷ್ಟೇ ಸಲಹೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಯಲ್ಲಿ ಪತ್ರ ಬರೆದಿರುವುದು ಸತ್ಯ. ಅಂತಿಮವಾಗಿ ನಮ್ಮ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ನಿತಿಸಂಹಿತೆ ಹಿನ್ನೆಲೆಯಲ್ಲಿ ಪೋರ್ಟ್​​​​ಲ್​ ಬಂದ್​ ಆಗಿತ್ತು

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್​​ಲ್​ ಅನ್ನು ಆರಂಭಮಾಡಲಿಲ್ಲ. ಸರ್ಕಾರ ಅನುಮತಿ ನೀಡಿದ ನಂತರವಷ್ಟೇ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ.

ಇದನ್ನೂ ಓದಿ: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ‘ಗ್ಯಾರಂಟಿ’ಗಳ ಲಾಭವನ್ನು ಪಡೆದುಕೊಳ್ಳಲು ಪಡಿತರ ಚೀಟಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮಾಡಿಸಲು ಜನರು ಮುಗಿಬೀಳುತ್ತಿದ್ದಾರೆ. ಹೊಸದಾಗಿ ಪಡಿತರ ಚೀಟಿ ಸಲ್ಲಿಸಲು ‘ಗ್ರಾಮ ಒನ್’ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಜನರು ನಿತ್ಯವೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ‘ಗ್ಯಾರಂಟಿ’ ಯೋಜನೆಗಳಿಗೆ ಪಡಿತರ ಚೀಟಿ ಮಾನದಂಡವಾಗಿದ್ದರಿಂದ ಅರ್ಜಿ ಸಲ್ಲಿಸಲು ಬರುವವರ ಸಂಖ್ಯೆ ಹೆಚ್ಚಾಗಿದೆ. ಸದ್ಯಕ್ಕೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ಸರ್ಕಾರ ಅನುವು ಮಾಡಿಕೊಟ್ಟಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Fri, 18 August 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us